August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಮಂಡಳಿ ಚುನಾವಣೆ

ಸಿಎ ಶಾಂತಾರಾಮ ಶೆಟ್ಟಿ ನೇತೃತ್ವದ ತಂಡಕ್ಕೆ ಭರ್ಜರಿ ಜಯ

ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಹಾಲಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ನೇತೃತ್ವದ ತಂಡ ಅಪ್ರತಿಮ ಗೆಲುವು ಸಾಧಿಸಿದೆ. ಕಣದಲ್ಲಿದ್ದ ಎಲ್ಲಾ 10 ಸ್ಥಾನಗಳನ್ನು ಗೆಲ್ಲುವ ಮೂಲಕ ಶೆಟ್ಟಿ ತಂಡವು ವಿರೋಧಿಗಳ ವಿರುದ್ಧ ‘ಕ್ಲೀನ್ ಸ್ವೀಪ್’ ದಾಖಲಿಸಿದೆ.

ಚುನಾವಣಾ ಫಲಿತಾಂಶದ ವಿವರ:

ಇಂದು ಫೆಬ್ರವರಿ 23ರಂದು ಸೋಮವಾರ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದಲ್ಲಿ ನಡೆದ ಮತ ಎಣಿಕೆಯಲ್ಲಿ ಶಾಂತಾರಾಮ ಶೆಟ್ಟಿ ತಂಡದ ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ವಿಜೇತ ಅಭ್ಯರ್ಥಿಗಳು ಮತ್ತು ಅವರು ಪಡೆದ ಮತಗಳು ಈ ಕೆಳಗಿನಂತಿವೆ:

  • ಸಿಎ ಶಾಂತಾರಾಮ ಶೆಟ್ಟಿ – 1005
  • ಡಾ. ಸುಮನ ಬಿ. – 876
  • ಡಾ. ಸತೀಶ್ ರಾವ್ – 870
  • ಡಾ. ಬಿ. ಸಚ್ಚಿದಾನಂದ ರೈ – 868
  • ರಾಘವೇಂದ್ರ ರಾವ್ – 844
  • ಪುಷ್ಪರಾಜ್ ಜೈನ್ – 835
  • ಪಿ.ಬಿ. ಹರಿಪ್ರಸಾದ್ ರೈ – 810
  • ಯತೀಶ್ ಬೈಕಂಪಾಡಿ – 797
  • ಸಚೇತ್ ಸುವರ್ಣ – 762
  • ಗುರುದತ್ ಎಂ. ನಾಯಕ್ – 762

ಚುನಾವಣಾ ಪ್ರಕ್ರಿಯೆ:

ಫೆಬ್ರವರಿ 22 ರಂದು ಆಡಳಿತ ಮಂಡಳಿಯ 10 ಸದಸ್ಯ ಸ್ಥಾನಗಳಿಗಾಗಿ ಮತದಾನ ನಡೆದಿತ್ತು. ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು. ಜಿಲ್ಲೆಯ 3654 ಮತದಾರರ ಪೈಕಿ 1388 ಮಂದಿ ಹಕ್ಕು ಚಲಾಯಿಸಿದ್ದರು. ಈ ಪೈಕಿ 24 ಮತಗಳು ಅಸಿಂಧುವಾಗಿದ್ದವು.

ಅಧಿಕಾರಿಗಳ ಮೇಲ್ವಿಚಾರಣೆ:

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಮಹೇಶ್ ಕುಮಾರ್ ಯು. ಚುನಾವಣಾಧಿಕಾರಿಯಾಗಿ ಹಾಗೂ ನಿವೃತ್ತ ಚುನಾವಣಾ ಉಪ ತಹಶೀಲ್ದಾರ್ ರಾಮಚಂದ್ರ ಬಿ. ಸಹಾಯಕ ಚುನಾವಣಾಧಿಕಾರಿಯಾಗಿ ಸಂಪೂರ್ಣ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page