August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯ ಶವ ವಿಟ್ಲದ ಗುರುಕುಲದ ಕೆರೆಯಲ್ಲಿ ಪತ್ತೆ

ಬಂಟ್ವಾಳ ತಾಲೂಕಿನ ವಿಟ್ಲದ ಗುರುಕುಲವೊಂದರಲ್ಲಿ ಸಂಸ್ಕೃತ ಶಿಕ್ಷಣ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾದ ಮರುದಿನವೇ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ಪ್ರಕರಣದ ಹಿನ್ನೆಲೆ:

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ದೂರುದಾರರ ಮಗಳು ಗುರುಕುಲದಲ್ಲಿ ಕಲಿಯುತ್ತಿದ್ದರು. ಫೆಬ್ರವರಿ 22ರ ಭಾನುವಾರ ಸಂಜೆ ಬಾಲಕಿಯು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದರು. ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 44/2026, ಕಲಂ: 137(2) BNS 2023 ರಡಿ ಪ್ರಕರಣ ದಾಖಲಾಗಿತ್ತು.

ಕೆರೆಯಲ್ಲಿ ಪತ್ತೆಯಾದ ಮೃತದೇಹ:

ನಾಪತ್ತೆಯಾದ ಬಾಲಕಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದ ಸಂದರ್ಭದಲ್ಲಿ ಇಂದು ಫೆಬ್ರವರಿ 23ರ ಸೋಮವಾರ ಬೆಳಿಗ್ಗೆ ಅವಳು ಕಲಿಯುತ್ತಿದ್ದ ಗುರುಕುಲದ ಆವರಣದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಪೊಲೀಸ್ ತನಿಖೆ:

ಮೃತದೇಹ ಪತ್ತೆಯಾದ ಬೆನ್ನಲ್ಲೇ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಯುಡಿಆರ್ (UDR): 03/2026 ಕಲಂ: 194(1) BNSS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page