April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯ ಶವ ವಿಟ್ಲದ ಗುರುಕುಲದ ಕೆರೆಯಲ್ಲಿ ಪತ್ತೆ

ಬಂಟ್ವಾಳ ತಾಲೂಕಿನ ವಿಟ್ಲದ ಗುರುಕುಲವೊಂದರಲ್ಲಿ ಸಂಸ್ಕೃತ ಶಿಕ್ಷಣ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾದ ಮರುದಿನವೇ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ಪ್ರಕರಣದ ಹಿನ್ನೆಲೆ:

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ದೂರುದಾರರ ಮಗಳು ಗುರುಕುಲದಲ್ಲಿ ಕಲಿಯುತ್ತಿದ್ದರು. ಫೆಬ್ರವರಿ 22ರ ಭಾನುವಾರ ಸಂಜೆ ಬಾಲಕಿಯು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದರು. ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 44/2026, ಕಲಂ: 137(2) BNS 2023 ರಡಿ ಪ್ರಕರಣ ದಾಖಲಾಗಿತ್ತು.

ಕೆರೆಯಲ್ಲಿ ಪತ್ತೆಯಾದ ಮೃತದೇಹ:

ನಾಪತ್ತೆಯಾದ ಬಾಲಕಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದ ಸಂದರ್ಭದಲ್ಲಿ ಇಂದು ಫೆಬ್ರವರಿ 23ರ ಸೋಮವಾರ ಬೆಳಿಗ್ಗೆ ಅವಳು ಕಲಿಯುತ್ತಿದ್ದ ಗುರುಕುಲದ ಆವರಣದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಪೊಲೀಸ್ ತನಿಖೆ:

ಮೃತದೇಹ ಪತ್ತೆಯಾದ ಬೆನ್ನಲ್ಲೇ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಯುಡಿಆರ್ (UDR): 03/2026 ಕಲಂ: 194(1) BNSS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page