April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯ ಶವ ವಿಟ್ಲದ ಗುರುಕುಲದ ಕೆರೆಯಲ್ಲಿ ಪತ್ತೆ

ಬಂಟ್ವಾಳ ತಾಲೂಕಿನ ವಿಟ್ಲದ ಗುರುಕುಲವೊಂದರಲ್ಲಿ ಸಂಸ್ಕೃತ ಶಿಕ್ಷಣ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾದ ಮರುದಿನವೇ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ಪ್ರಕರಣದ ಹಿನ್ನೆಲೆ:

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ದೂರುದಾರರ ಮಗಳು ಗುರುಕುಲದಲ್ಲಿ ಕಲಿಯುತ್ತಿದ್ದರು. ಫೆಬ್ರವರಿ 22ರ ಭಾನುವಾರ ಸಂಜೆ ಬಾಲಕಿಯು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದರು. ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 44/2026, ಕಲಂ: 137(2) BNS 2023 ರಡಿ ಪ್ರಕರಣ ದಾಖಲಾಗಿತ್ತು.

ಕೆರೆಯಲ್ಲಿ ಪತ್ತೆಯಾದ ಮೃತದೇಹ:

ನಾಪತ್ತೆಯಾದ ಬಾಲಕಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದ ಸಂದರ್ಭದಲ್ಲಿ ಇಂದು ಫೆಬ್ರವರಿ 23ರ ಸೋಮವಾರ ಬೆಳಿಗ್ಗೆ ಅವಳು ಕಲಿಯುತ್ತಿದ್ದ ಗುರುಕುಲದ ಆವರಣದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಪೊಲೀಸ್ ತನಿಖೆ:

ಮೃತದೇಹ ಪತ್ತೆಯಾದ ಬೆನ್ನಲ್ಲೇ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಯುಡಿಆರ್ (UDR): 03/2026 ಕಲಂ: 194(1) BNSS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page