May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ಅನುದಾನ

ಮಳೆ ಹಾನಿ ಕಾಮಗಾರಿಗಳಿಗೆ MLC ಐವನ್ ಡಿಸೋಜ ಚಾಲನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪುನರ್ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ MLC ಐವನ್ ಡಿಸೋಜ ತಿಳಿಸಿದ್ದಾರೆ.

ಈ ಅನುದಾನದಡಿ ಸುಮಾರು 18 ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮಳೆಗಾಲ ಆರಂಭವಾಗುವ ಮೊದಲೇ ಈ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪ್ರಮುಖ ಕಾಮಗಾರಿಗಳು:

* ಕದ್ರಿ ಉತ್ತರ (ವಾರ್ಡ್ 32): ಸರ್ಕ್ಯೂಟ್ ಹೌಸ್ ಬಳಿಯ ರಕ್ಷಣಾ ಗೋಡೆ ನಿರ್ಮಾಣಕ್ಕೆ 1.90 ಕೋಟಿ ರೂಪಾಯಿ

* ಮಂಗಳೂರು ಕೋರ್ಟ್ ವಾರ್ಡ್ (ವಾರ್ಡ್ 40): ಸಿಟಿ ಆಸ್ಪತ್ರೆ ಎದುರು ರಾಜಕಾಲುವೆ ನಿರ್ಮಾಣಕ್ಕೆ 30 ಲಕ್ಷ ರೂ ರೂಪಾಯಿ

* ಬೆಂದೂರ್ ವೆಲ್ (ವಾರ್ಡ್ 38): ಗೀತಾಂಜಲಿ ಎದುರು ತಡೆಗೋಡೆ ಅಭಿವೃದ್ಧಿಗೆ 30 ಲಕ್ಷ ರೂಪಾಯಿ

* ಇತರ ಪ್ರದೇಶಗಳು: ಅನೆಗುಂಡಿ ಆಶ್ರಯ ಬಡಾವಣೆ, ನಂದಗೋಕುಲ ಅಪಾರ್ಟ್‌ಮೆಂಟ್ ಬಳಿ ರಾಜಕಾಲುವೆ ಹಾಗೂ ಬಲ್ಲಾಳ್ ಬಾಗ್ ಶರಾವತಿ ಅಪಾರ್ಟ್‌ಮೆಂಟ್ ಬಳಿ ತಡೆಗೋಡೆ ನಿರ್ಮಾಣ.

ಇದಲ್ಲದೆ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹೂಳು ಎತ್ತುವ (Dredging) ಕಾಮಗಾರಿಗಾಗಿ ಪ್ರತ್ಯೇಕವಾಗಿ 3.50 ಕೋಟಿ ರೂಪಾಯಿ ಮಂಜೂರಾಗಿದೆ. ನಗರದ ಒಳಚರಂಡಿ ಮತ್ತು ರಾಜಕಾಲುವೆಗಳ ಶಾಶ್ವತ ಅಭಿವೃದ್ಧಿಗಾಗಿ ಸುಮಾರು 1250 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ಜಾರಿಗೆ ತರಲು ಸರ್ಕಾರದ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಐವನ್ ಡಿಸೋಜ ತಿಳಿಸಿದರು.

ಪರಿಶೀಲನಾ ಸಂದರ್ಭದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಕಾರ್ಪೊರೇಟರ್‌ಗಳಾದ ನವೀನ್ ಡಿಸೋಜ, ಲ್ಯಾನ್ಸಿಲೋಟ್ ಪಿಂಟೋ ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಪಾಲಿಕೆ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page