July 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡಕ್ಕೆ ಬಜೆಟ್ ಕೊಡುಗೆ – ಮಾಣಿಯಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಅಧಿಕೃತ ಮುದ್ರೆ

ಬಹುಕಾಲದ ಬೇಡಿಕೆಗೆ ಸ್ಪಂದನೆ ಮಾಡಿದ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರವು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಬಂಟ್ವಾಳ ತಾಲೂಕಿನ ಮಾಣಿ (Mani) ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಅಧಿಕೃತವಾಗಿ ಅನುಮೋದನೆ ನೀಡಲಾಗಿದೆ.

ಬಜೆಟ್ ಪ್ರತಿಯ ಅನುಬಂಧ-8ರ ಕಂಡಿಕೆ 464ರ ಅನ್ವಯ, ರಾಜ್ಯದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಪೊಲೀಸ್ ಠಾಣೆಗೆ ಮೊದಲ ಆದ್ಯತೆ ನೀಡಲಾಗಿದೆ. ಗೃಹ ಇಲಾಖೆಯ (ಒಳಾಡಳಿತ) ಅಡಿಯಲ್ಲಿ ಈ ಠಾಣೆಯು ಕಾರ್ಯನಿರ್ವಹಿಸಲಿದ್ದು, ಈ ಭಾಗದ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ.

ಹೆಚ್ಚಿದ ಭದ್ರತೆ:

ಮಾಣಿ ಭಾಗವು ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಜಂಕ್ಷನ್ ಆಗಿರುವುದರಿಂದ ಮತ್ತು ದಿನೇ ದಿನೇ ಬೆಳೆಯುತ್ತಿರುವ ಜನಸಂಖ್ಯೆಯ ಹಿನ್ನೆಲೆಯಲ್ಲಿ ಇಲ್ಲಿ ಪ್ರತ್ಯೇಕ ಪೊಲೀಸ್ ಠಾಣೆಯ ಅಗತ್ಯವಿತ್ತು. ಸರ್ಕಾರದ ಈ ನಿರ್ಧಾರದಿಂದ ಸ್ಥಳೀಯ ನಿವಾಸಿಗಳಿಗೆ ಹಾಗೂ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ದೊರೆಯಲಿದ್ದು, ಅಪರಾಧ ತಡೆಗಟ್ಟುವಿಕೆಗೆ ಸಹಕಾರಿಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾಣಿ ಮಾತ್ರವಲ್ಲದೆ, ‘ಸಜೀಪನಡು’ವಿನಲ್ಲೂ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಈ ಘೋಷಣೆಗೆ ಸ್ಥಳೀಯ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

You may also like

News

ಹಿರಿಯ ಕಲಾವಿದ ಎಲ್.ಕೆ. ಧರಣ್ ಮಾಣಿ ಅವರಿಗೆ ಪಿತೃ ವಿಯೋಗ

ಭಜನಾ ಗಾಯಕ ರುಕ್ಮಯ್ಯ ಲಾಡ್ರುಕೋಡಿ ನಿಧನ ಖ್ಯಾತ ಹಿನ್ನೆಲೆ ಗಾಯಕ, ಕಲಾವಿದ ಹಾಗೂ ಸಂಕೀರ್ತನಕಾರ ಎಲ್.ಕೆ. ಧರಣ್ ಮಾಣಿ ಅವರ ತಂದೆ, ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ
News

ಪುತ್ತೂರಿನಲ್ಲಿ ಯುವತಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪ – ಸತ್ಯಾಂಶ ಬಿಚ್ಚಿಟ್ಟ ಪೊಲೀಸರು

ಉಭಯ ಕಡೆಯಿಂದ ದೂರು ದಾಖಲು! ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ – ಜಿಲ್ಲಾ SP ಡಾ. ಅರುಣ್ ಕೆ. ಯುವತಿಯೊಬ್ಬಳು

You cannot copy content of this page