April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಪರೀಕ್ಷಾ ದಿನಗಳಲ್ಲಿ KSRTC ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ರಾಜ್ಯದಲ್ಲಿ ಶೀಘ್ರವೇ ಪ್ರಾರಂಭವಾಗಲಿರುವ SSLC ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಭರ್ಜರಿ ಕೊಡುಗೆ ನೀಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ಹಿಂತಿರುಗಲು ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ.

ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಿ:

ದಿನಾಂಕ 18.03.2026 ರಿಂದ 02.04.2026 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ಬಸ್ ಹತ್ತುವಾಗ ತಮ್ಮ ‘ SSLC ಪರೀಕ್ಷಾ ಪ್ರವೇಶ ಪತ್ರ’ (Hall Ticket) ತೋರಿಸುವುದು ಕಡ್ಡಾಯವಾಗಿದೆ.

ಯಾವ ಬಸ್‌ಗಳಲ್ಲಿ ಸೌಲಭ್ಯ ಲಭ್ಯ?

ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಈ ಉಚಿತ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್‌ಗಳನ್ನು ನಿಲುಗಡೆ (Request Stop) ಮಾಡಲು ಚಾಲಕ ಮತ್ತು ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ.

ಪ್ರಮುಖ ಅಂಶಗಳು:

* ಸೌಲಭ್ಯದ ಅವಧಿ: 18 ಮಾರ್ಚ್ 2026 ರಿಂದ 02 ಏಪ್ರಿಲ್ 2026 ರವರೆಗೆ.

* ಅಗತ್ಯ ದಾಖಲೆ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರ.

* ಬಸ್ ವಿಧಗಳು: ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳು.

* ಉದ್ದೇಶ: ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ಮತ್ತು ಯಾವುದೇ ತೊಂದರೆಯಿಲ್ಲದೆ ತಲುಪಲು ಸಹಕರಿಸುವುದು.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page