August 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲೆಯ ಅದಾಲತ್ – ಮಾರ್ಚ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೇರಿದಂತೆ ವಿವಿಧ ತಾಲ್ಲೂಕುಗಳಲ್ಲಿ ಬರುವ ಮಾರ್ಚ್ 14ರಂದು ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ. ತ್ವರಿತ ನ್ಯಾಯಕ್ಕಾಗಿ ಆಯೋಜಿಸಲಾಗಿರುವ ಈ ಅದಾಲತ್ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರಿ ಮತ್ತು ಸುಳ್ಯ ನ್ಯಾಯಾಲಯಗಳ ಆವರಣದಲ್ಲಿ ನಡೆಯಲಿದೆ.

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ:

ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0” ಎಂಬ 90 ದಿನಗಳ ವಿಶೇಷ ಅಭಿಯಾನವು ಈಗಾಗಲೇ ಜಾರಿಯಲ್ಲಿದೆ. 2026 ಜನವರಿ 02 ರಿಂದಲೇ ಪ್ರಕರಣಗಳ ಗುರುತಿಸುವಿಕೆ ಪ್ರಾರಂಭವಾಗಿದ್ದು, ಜಿಲ್ಲೆಯ ಸುಮಾರು 87 ನುರಿತ ವಕೀಲರು ಮಧ್ಯಸ್ಥಗಾರರಾಗಿ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇತ್ಯರ್ಥಪಡಿಸಬಹುದಾದ ಪ್ರಕರಣಗಳು:

ನ್ಯಾಯಾಲಯದಲ್ಲಿ ದಾಖಲಾಗದ (Pre-litigation) ಹಾಗೂ ಬಾಕಿ ಇರುವ ಈ ಕೆಳಗಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಇದೊಂದು ಸುವರ್ಣಾವಕಾಶವಾಗಿದೆ:

* ಮೋಟಾರು ವಾಹನ ಅಪಘಾತ ಪ್ರಕರಣಗಳು.

* ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು.

* ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು.

* ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳು.

* ವಿಚ್ಛೇದನ ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು.

* ಗ್ರಾಹಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವಿದ್ಯುತ್ ಮತ್ತು ನೀರಿನ ಶುಲ್ಕ ಸಂಬಂಧಿತ ಪ್ರಕರಣಗಳು.

* ವೇತನ, ಭತ್ಯೆ ಹಾಗೂ ಪಿಂಚಣಿ ಸಂಬಂಧಿತ ಸೇವಾ ಪ್ರಕರಣಗಳು.

* ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು.

* ಕಾನೂನಾತ್ಮಕವಾಗಿ ರಾಜಿ ಮಾಡಿಕೊಳ್ಳಬಹುದಾದ ಎಲ್ಲಾ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು.

ರಾಜಿ ಸಂಧಾನದ ಪ್ರಯೋಜನಗಳು:

* ಶುಲ್ಕ ಮರುಪಾವತಿ: ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡರೆ ಪೂರ್ಣವಾಗಿ ಮರುಪಾವತಿಸಲಾಗುವುದು.

* ಸಮಯ ಮತ್ತು ಹಣದ ಉಳಿತಾಯ: ಕಡಿಮೆ ಖರ್ಚಿನಲ್ಲಿ ತ್ವರಿತವಾಗಿ ನ್ಯಾಯ ಪಡೆಯಬಹುದು.

* ಮೇಲ್ಮನವಿ ಇಲ್ಲ: ರಾಜಿ ಸಂಧಾನದ ಮೂಲಕ ನೀಡಲಾದ ಆದೇಶದ ವಿರುದ್ಧ ಯಾವುದೇ ಮೇಲ್ಮನವಿಗೆ ಅವಕಾಶವಿರುವುದಿಲ್ಲ.

* ಸೌಹಾರ್ದಯುತ ಅಂತ್ಯ: ಉಭಯ ಪಕ್ಷಗಾರರ ಸಮ್ಮತಿಯೊಂದಿಗೆ ವಿವಾದಗಳು ಇತ್ಯರ್ಥವಾಗುವುದರಿಂದ ಸಂಬಂಧಗಳು ಸುಧಾರಿಸುತ್ತವೆ.

ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲೂಕು ನ್ಯಾಯಾಲಯಗಳ ಆವರಣದಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳನ್ನು ಸಂಪರ್ಕಿಸಬಹುದು. ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಮಾಹಿತಿಗಾಗಿ ಬೆಂಗಳೂರು, ಧಾರವಾಡ ಅಥವಾ ಕಲಬುರಗಿಯ ಮಧ್ಯಸ್ಥಿಕಾ ಕೇಂದ್ರಗಳನ್ನು ಸಂಪರ್ಕಿಸಲು ಕೋರಲಾಗಿದೆ.

You may also like

News

ಮಂಗಳೂರಿನಲ್ಲಿ ಪರ್ಯಾಯ ದಿನ ನೀರು ಪೂರೈಕೆ – ಆಗಸ್ಟ್‌ 31ರವರೆಗೆ ತಾತ್ಕಾಲಿಕ ವ್ಯವಸ್ಥೆ

ತುಂಬೆ ಜಾಕ್‌ವೆಲ್‌ನ ಇನ್‌ಟೇಕ್‌ ಭಾಗದಲ್ಲಿ ಮಳೆನೀರಿನೊಂದಿಗೆ ಮರದ ದಿಮ್ಮಿಗಳು, ಕೊಂಬೆಗಳು, ಪ್ಲಾಸ್ಟಿಕ್‌ ತ್ಯಾಜ್ಯ, ಬಟ್ಟೆ, ಚೀಲಗಳು, ಹೂಳು ಸೇರಿದಂತೆ ವಿವಿಧ ತ್ಯಾಜ್ಯಗಳು ಸಂಗ್ರಹಗೊಂಡ ಪರಿಣಾಮ ನೀರು ಪಂಪಿಂಗ್‌
News

ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ ವಿಷನ್ ಸಮಿತಿ ಅಧ್ಯಕ್ಷರಾಗಿ ಡಾ. ಅಖ್ತರ್ ಹುಸೇನ್ ನೇಮಕ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ (State Oral Health Programme) ವಿಷನ್ ಸಮಿತಿ ಅಧ್ಯಕ್ಷರಾಗಿ

You cannot copy content of this page