April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾವಿಗೆ ಬಿದ್ದ ಪುಟಾಣಿ – ಪೈಪ್ ಹಿಡಿದು ಮಗುವಿನ ಸಾಹಸ

ಜೀವದ ಹಂಗು ತೊರೆದು ಮಗುವಿನ ರಕ್ಷಣೆ ಮಾಡಿದ ಫಯಾಜ್

ಆಟವಾಡುತ್ತಾ ಆಕಸ್ಮಿಕವಾಗಿ ಆಳವಾದ ಬಾವಿಗೆ ಬಿದ್ದ ಎರಡು ವರ್ಷದ ಮಗುವನ್ನು ನೆರೆಮನೆಯ ಯುವಕ ಸಮಯಪ್ರಜ್ಞೆ ಮೆರೆದು ಪ್ರಾಣಾಪಾಯದಿಂದ ಪಾರು ಮಾಡಿದ ರೋಚಕ ಘಟನೆ ಶಿರಸಿಯ ಕಸ್ತೂರಬಾ ನಗರದಲ್ಲಿ ನಡೆದಿದೆ.

ಘಟನೆಯ ವಿವರ:

ನಗರದ ಕಸ್ತೂರಬಾ ನಗರದ ನಿವಾಸಿಗಳಾದ ಪುಟ್ಟ ಮಗು ಭುವಿ, ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾಳೆ. ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದಾಗ ಬಾವಿಯ ಒಳಗಿನಿಂದ ಮಗುವಿನ ಅಳುವಿನ ಧ್ವನಿ ಕೇಳಿಬಂದಿದೆ. ಕೂಡಲೇ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ಬಾವಿಯ ನೀರಿನಲ್ಲಿದ್ದ ಮೋಟಾರ್ ಪೈಪ್ ಅನ್ನು ಬಿಗಿಯಾಗಿ ಹಿಡಿದುಕೊಂಡು ತೂಗಾಡುತ್ತಿರುವುದು ಕಂಡುಬಂದಿದೆ.

ಪಯಾಜ್ ಅವರ ಸಾಹಸಮಯ ರಕ್ಷಣೆ:

ಮಗು ಬಾವಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆಯೇ ನೆರೆಮನೆಯ ನಿವಾಸಿ ಪಯಾಜ್ ಚೌಟಿ ಅವರು ಸ್ಥಳಕ್ಕೆ ಧಾವಿಸಿದರು. ಕ್ಷಣ ಮಾತ್ರವೂ ತಡಮಾಡದೆ, ಹಗ್ಗದ ಸಹಾಯದಿಂದ ಆಳವಾದ ಬಾವಿಗೆ ಇಳಿದ ಪಯಾಜ್, ಪೈಪ್ ಹಿಡಿದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮಗುವನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ.

“ಮಗು ಅಳುತ್ತಾ ಪೈಪ್ ಹಿಡಿದುಕೊಂಡಿರುವುದನ್ನು ಕಂಡಾಗ ಮನಸ್ಸು ತಡೆಯಲಿಲ್ಲ. ಹೇಗಾದರೂ ಮಾಡಿ ಮಗುವನ್ನು ಉಳಿಸಲೇಬೇಕು ಎಂಬ ಧೈರ್ಯ ಬಂತು,” ಎಂದು ಪಯಾಜ್ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಮಾನವೀಯತೆಗೆ ಸಂದ ಜಯ:

ಸಕಾಲದಲ್ಲಿ ಸ್ಪಂದಿಸಿ ಮಗುವಿನ ಜೀವ ಉಳಿಸಿದ ಪಯಾಜ್ ಅವರ ಸಾಹಸಕ್ಕೆ ಶಿರಸಿ ಜನತೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಜಾತಿ-ಧರ್ಮದ ಹಂಗಿಲ್ಲದೆ ಮಾನವೀಯತೆಯೇ ದೊಡ್ಡದು ಎಂದು ಸಾರಿದ ಪಯಾಜ್ ಅವರ ಕಾರ್ಯ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸದ್ಯ ಮಗು ಭುವಿ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದು, ಹೆತ್ತವರು ನಿಟ್ಟುಸಿರು ಬಿಟ್ಟಿದ್ದಾರೆ.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page