May 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು MSEZ ವ್ಯಾಪ್ತಿಯಲ್ಲಿ ರಾಸಾಯನಿಕ ಟ್ಯಾಂಕ್ ಗೋಡೆ ಕುಸಿತ – ಫಲ್ಗುಣಿ ನದಿಗೆ ಸೇರುತ್ತಿದೆ ವಿಷಕಾರಿ ನೀರು

ಮಂಗಳೂರು ನಗರದ ವಿಶೇಷ ಆರ್ಥಿಕ ವಲಯದ (MSEZ) ಒಳಗಿರುವ GMPL ಕಂಪನಿಯ ರಾಸಾಯನಿಕ ಮಿಶ್ರಿತ ಟ್ಯಾಂಕ್‌ನ ಗೋಡೆ ಶನಿವಾರ ಕುಸಿದಿದ್ದು, ಅಪಾರ ಪ್ರಮಾಣದ ಅಪಾಯಕಾರಿ ರಾಸಾಯನಿಕ ಯುಕ್ತ ನೀರು ಹೊರಹರಿತಿದೆ. ಈ ಘಟನೆಯಿಂದಾಗಿ ಸ್ಥಳೀಯ ಪರಿಸರ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಭಾರೀ ಸಂಚಕಾರ ಎದುರಾಗಿದೆ.

ಘಟನೆಯ ವಿವರ: GMPL ಕಂಪನಿಯ ಆವರಣದಲ್ಲಿದ್ದ ಸಂಗ್ರಹಣಾ ಟ್ಯಾಂಕ್ ಗೋಡೆ ಕುಸಿದ ಪರಿಣಾಮ, ಅದರಲ್ಲಿದ್ದ ಅತೀವ ಅಪಾಯಕಾರಿ ರಾಸಾಯನಿಕಗಳು ಹತ್ತಿರದ ಬಜಪೆ ಧೂಮವತಿಧಾಮದ ಬಳಿಯ ಕೊಂಚಾರು ಹೊಳೆಗೆ ಸೇರಿದೆ. ಅಲ್ಲಿಂದ ಈ ಕಲುಷಿತ ನೀರು ನೇರವಾಗಿ ಮರವೂರು – ಫಲ್ಗುಣಿ ನದಿಯ ಒಳಹರಿವಿಗೆ ಸೇರ್ಪಡೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಪರಿಸರಕ್ಕೆ ಎದುರಾದ ಅಪಾಯ:

* ನದಿಯ ಮಾಲಿನ್ಯ: ಫಲ್ಗುಣಿ ನದಿಗೆ ರಾಸಾಯನಿಕ ಸೇರುತ್ತಿರುವುದರಿಂದ ಜಲಚರಗಳಿಗೆ ಪ್ರಾಣಾಪಾಯ ಉಂಟಾಗುವ ಸಾಧ್ಯತೆ ಇದೆ.

* ಕುಡಿಯುವ ನೀರಿಗೆ ಕುತ್ತು: ನದಿಯ ನೀರನ್ನು ಆಶ್ರಯಿಸಿರುವ ಸುತ್ತಮುತ್ತಲಿನ ಗ್ರಾಮಗಳ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳುವ ಭೀತಿ ಎದುರಾಗಿದೆ.

* ಆರೋಗ್ಯದ ಮೇಲೆ ಪರಿಣಾಮ: ರಾಸಾಯನಿಕ ಮಿಶ್ರಿತ ನೀರು ಮತ್ತು ಅದರಿಂದ ಹೊರಹೊಮ್ಮುವ ವಾಸನೆಯಿಂದಾಗಿ ಸ್ಥಳೀಯರಲ್ಲಿ ಉಸಿರಾಟದ ತೊಂದರೆ ಅಥವಾ ಚರ್ಮದ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಸಾರ್ವಜನಿಕರ ಆಗ್ರಹ:

ಈ ಗಂಭೀರ ಪರಿಸ್ಥಿತಿಯನ್ನು ಗಮನಿಸಿರುವ ಸ್ಥಳೀಯ ನಿವಾಸಿಗಳು ಮತ್ತು ಪರಿಸರ ಪ್ರೇಮಿಗಳು ಕೂಡಲೇ ಮಧ್ಯಪ್ರವೇಶಿಸುವಂತೆ ಆಗ್ರಹಿಸಿದ್ದಾರೆ.

* ಬಜಪೆ ಪಟ್ಟಣ ಪಂಚಾಯಿತಿ ಮತ್ತು ಜಿಲ್ಲಾಡಳಿತ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಬೇಕು.

* ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (KSPCB) ರಾಸಾಯನಿಕ ಹರಿವನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳಬೇಕು.

* ನಿರ್ಲಕ್ಷ್ಯ ವಹಿಸಿದ ಕಂಪನಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.

ಸ್ಥಳೀಯ ಜನರ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ.

You may also like

News

ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ

ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ

You cannot copy content of this page