April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ಕೊಣಾಜೆ ಪೊಲೀಸರಿಂದ ಕಾಮುಕನ ಬಂಧನ

ಒಂಬತ್ತು ವರ್ಷದ ಬಾಲಕನಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಡ್ಯಾರ್ ನಿವಾಸಿ, ಬಿಜೈನ MSC ಲಾಜಿಸ್ಟಿಕ್ಸ್‌ನಲ್ಲಿ ಉದ್ಯೋಗಿಯಾಗಿರುವ 33 ವರ್ಷ ಪ್ರಾಯದ ಆಶೀಶ್ ಪೂಜಾರಿ ಬಂಧಿತ ಆರೋಪಿ.

ಪ್ರಕರಣದ ಹಿನ್ನೆಲೆ:

ದಿನಾಂಕ 18-03-2026 ರಂದು ದಾಖಲಾದ ದೂರಿನ ಪ್ರಕಾರ, ಆರೋಪಿಯು ಬಾಲಕನಿಗೆ ಹಣ ಮತ್ತು ತಿಂಡಿ ನೀಡುವುದಾಗಿ ನಂಬಿಸಿ ಜನರಿಲ್ಲದಡೆ ಕರೆದುಕೊಂಡು ಹೋಗಿದ್ದನು. ಅಲ್ಲಿ ಬಾಲಕನಿಗೆ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ, ಅಸಭ್ಯವಾಗಿ ವರ್ತಿಸುವಂತೆ ಪ್ರೇರೇಪಿಸಿದ್ದಲ್ಲದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಕಾನೂನು ಕ್ರಮ:

ಈ ಅಮಾನವೀಯ ಕೃತ್ಯದ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ವಿರುದ್ಧ ಈ ಕೆಳಗಿನ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ:

* POCSO ಕಾಯ್ದೆ: ಸೆಕ್ಷನ್ 4, 6, ಮತ್ತು 12.

* BNS (ಭಾರತೀಯ ನ್ಯಾಯ ಸಂಹಿತೆ): ಸೆಕ್ಷನ್ 75.

ಬಂಧಿತ ಆರೋಪಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page