April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಹಿತ್ಯ ರತ್ನ ರೇಮಂಡ್ ಡಿಕುನಾ ತಾಕೊಡೆ ಅವರಿಗೆ ಜನ್ಮಭೂಮಿಯ ಗೌರವ

‘ನಾಲೋದಿ ಬೊಳ್ಳಿಲು’ ಕೃತಿ ಲೋಕಾರ್ಪಣೆ

ಕರಾವಳಿಯ ಖ್ಯಾತ ಸಾಹಿತ್ಯ ಪ್ರೇಮಿ ಹಾಗೂ ಸಂಘಟಕರಾದ ರೇಮಂಡ್ ಡಿಕುನಾ ತಾಕೊಡೆ ಅವರಿಗೆ ತಮ್ಮ ಹುಟ್ಟೂರಿನಲ್ಲಿ ಅಭಿನಂದನಾ ಸನ್ಮಾನ ಹಾಗೂ ಅವರು ತುಳು ಲಿಪಿಯಲ್ಲಿ ರಚಿಸಿರುವ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22ರ ಭಾನುವಾರ ಅದ್ಧೂರಿಯಾಗಿ ಜರುಗಲಿದೆ.

ಕಾರ್ಯಕ್ರಮದ ವಿವರ:

ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಅಂದು ಬೆಳಗ್ಗೆ 10:00 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಕೆ. ಅಭಯಚಂದ್ರ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಣ ತಜ್ಞ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ ಅವರು ಹೊಸ ಕೃತಿಯನ್ನು ಬಿಡುಗಡೆಗೊಳಿಸಲಿದ್ದಾರೆ. ಪ್ರಖ್ಯಾತ ಸಾಹಿತಿ ಗೀತಾ ಲಕ್ಷ್ಮೀಶ್ ಶೆಟ್ಟಿ ಅವರು ಪುಸ್ತಕದ ಕುರಿತು ಪರಿಚಯಾತ್ಮಕ ಮಾತುಗಳನ್ನಾಡಲಿದ್ದಾರೆ.

ಸಂಘ-ಸಂಸ್ಥೆಗಳ ಒಕ್ಕೂಟದಿಂದ ಆಯೋಜನೆ:

ಈ ವಿಶೇಷ ಸಮಾರಂಭವನ್ನು ಮೂಡುಬಿದಿರೆಯ ವಿವಿಧ ಪ್ರತಿಷ್ಠಿತ ಸಂಸ್ಥೆಗಳು ಸಂಯುಕ್ತವಾಗಿ ಆಯೋಜಿಸಿರುವುದು ವಿಶೇಷ.

* ತುಳುಕೂಟ (ರಿ), ಮೂಡುಬಿದಿರೆ

* ವರ್ಕಿಂಗ್ ಜರ್ನಲಿಸ್ಟ್ಸ್ ಅಸೋಸಿಯೇಷನ್ ಹಾಗೂ ಪ್ರೆಸ್ ಕ್ಲಬ್

* ಜೆಸಿಐ ಮೂಡುಬಿದಿರೆ ತ್ರಿಭುವನ್

* ಅಭಿಮಾನಿ ಬಳಗ ತಾಕೊಡೆ ಮತ್ತು ಅಭಿಮಾನಿ ರಿಕ್ಷಾ ಚಾಲಕರ ಸಂಘ

* ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಹಾಗೂ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್

ತುಳು ಭಾಷೆ ಮತ್ತು ಲಿಪಿಯ ಬೆಳವಣಿಗೆಗೆ ಪೂರಕವಾಗಿರುವ ಈ ಕೃತಿಯ ಬಿಡುಗಡೆ ಮತ್ತು ಸಾಹಿತ್ಯಿಕ ಸಾಧಕನಿಗೆ ನಡೆಯುವ ಸನ್ಮಾನ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಂಕೆಂದು ಆಯೋಜಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

You may also like

News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ
News

ಜಗದ್ಗುರು ಪೋಪ್ 14ನೇ ಲಿಯೋ ಅವರ ವಿರುದ್ಧ ಟ್ರಂಪ್ ಅವಹೇಳನಕಾರಿ ಹೇಳಿಕೆ – ಮಂಗಳೂರು ಧರ್ಮಕ್ಷೇತ್ರದಿಂದ ತೀವ್ರ ಖಂಡನೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ಜೆ.ಬಿ. ಸಲ್ಡಾನ್ಹಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ವಿಶ್ವದ ಕೋಟ್ಯಂತರ ಕ್ರೈಸ್ತ ವಿಶ್ವಾಸಿಗಳ ಪರಮೋಚ್ಛ ಗುರುಗಳಾದ ಪೋಪ್ 14ನೇ

You cannot copy content of this page