August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಹಿತ್ಯ ರತ್ನ ರೇಮಂಡ್ ಡಿಕುನಾ ತಾಕೊಡೆ ಅವರಿಗೆ ಜನ್ಮಭೂಮಿಯ ಗೌರವ

‘ನಾಲೋದಿ ಬೊಳ್ಳಿಲು’ ಕೃತಿ ಲೋಕಾರ್ಪಣೆ

ಕರಾವಳಿಯ ಖ್ಯಾತ ಸಾಹಿತ್ಯ ಪ್ರೇಮಿ ಹಾಗೂ ಸಂಘಟಕರಾದ ರೇಮಂಡ್ ಡಿಕುನಾ ತಾಕೊಡೆ ಅವರಿಗೆ ತಮ್ಮ ಹುಟ್ಟೂರಿನಲ್ಲಿ ಅಭಿನಂದನಾ ಸನ್ಮಾನ ಹಾಗೂ ಅವರು ತುಳು ಲಿಪಿಯಲ್ಲಿ ರಚಿಸಿರುವ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22ರ ಭಾನುವಾರ ಅದ್ಧೂರಿಯಾಗಿ ಜರುಗಲಿದೆ.

ಕಾರ್ಯಕ್ರಮದ ವಿವರ:

ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಅಂದು ಬೆಳಗ್ಗೆ 10:00 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಕೆ. ಅಭಯಚಂದ್ರ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಣ ತಜ್ಞ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ ಅವರು ಹೊಸ ಕೃತಿಯನ್ನು ಬಿಡುಗಡೆಗೊಳಿಸಲಿದ್ದಾರೆ. ಪ್ರಖ್ಯಾತ ಸಾಹಿತಿ ಗೀತಾ ಲಕ್ಷ್ಮೀಶ್ ಶೆಟ್ಟಿ ಅವರು ಪುಸ್ತಕದ ಕುರಿತು ಪರಿಚಯಾತ್ಮಕ ಮಾತುಗಳನ್ನಾಡಲಿದ್ದಾರೆ.

ಸಂಘ-ಸಂಸ್ಥೆಗಳ ಒಕ್ಕೂಟದಿಂದ ಆಯೋಜನೆ:

ಈ ವಿಶೇಷ ಸಮಾರಂಭವನ್ನು ಮೂಡುಬಿದಿರೆಯ ವಿವಿಧ ಪ್ರತಿಷ್ಠಿತ ಸಂಸ್ಥೆಗಳು ಸಂಯುಕ್ತವಾಗಿ ಆಯೋಜಿಸಿರುವುದು ವಿಶೇಷ.

* ತುಳುಕೂಟ (ರಿ), ಮೂಡುಬಿದಿರೆ

* ವರ್ಕಿಂಗ್ ಜರ್ನಲಿಸ್ಟ್ಸ್ ಅಸೋಸಿಯೇಷನ್ ಹಾಗೂ ಪ್ರೆಸ್ ಕ್ಲಬ್

* ಜೆಸಿಐ ಮೂಡುಬಿದಿರೆ ತ್ರಿಭುವನ್

* ಅಭಿಮಾನಿ ಬಳಗ ತಾಕೊಡೆ ಮತ್ತು ಅಭಿಮಾನಿ ರಿಕ್ಷಾ ಚಾಲಕರ ಸಂಘ

* ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಹಾಗೂ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್

ತುಳು ಭಾಷೆ ಮತ್ತು ಲಿಪಿಯ ಬೆಳವಣಿಗೆಗೆ ಪೂರಕವಾಗಿರುವ ಈ ಕೃತಿಯ ಬಿಡುಗಡೆ ಮತ್ತು ಸಾಹಿತ್ಯಿಕ ಸಾಧಕನಿಗೆ ನಡೆಯುವ ಸನ್ಮಾನ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಂಕೆಂದು ಆಯೋಜಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page