April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಂಡಿಬಾಗಿಲು ಸಿಯೋನ್ ಆಶ್ರಮದ 27ನೇ ವಾರ್ಷಿಕೋತ್ಸವ – ಸೇವಾ ಕಾರ್ಯಕ್ಕೆ ಗಣ್ಯರ ಶ್ಲಾಘನೆ

ಗಂಡಿಬಾಗಿಲು ಇಲ್ಲಿನ ಪ್ರಸಿದ್ಧ ಸಮಾಜ ಸೇವಾ ಸಂಸ್ಥೆಯಾದ ಸಿಯೋನ್ ಆಶ್ರಮ ಟ್ರಸ್ಟ್ (ರಿ.) ತನ್ನ 27ನೇ ವರ್ಷದ ಸಂಭ್ರಮವನ್ನು ಸಡಗರದಿಂದ ಆಚರಿಸಿತು. ಮಾರ್ಚ್ 22ರಂದು ಭಾನುವಾರ ನಡೆದ ಈ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಆಶ್ರಮದ ನಿಸ್ವಾರ್ಥ ಸೇವೆಯನ್ನು ಗಣ್ಯರು ಮುಕ್ತಕಂಠದಿಂದ ಪ್ರಶಂಸಿಸಿದರು.

ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ. ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರಕಾಶ್ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆಶ್ರಮದ ಕುರಿತು ತಾವು ರಚಿಸಿದ ಸ್ವರಚಿತ ಕವನವನ್ನು ಹಾಡುವ ಮೂಲಕ ಅವರು ಎಲ್ಲರ ಗಮನ ಸೆಳೆದರಲ್ಲದೆ, ಆಶ್ರಮದ ಮಾನವೀಯ ಕಾರ್ಯಗಳು ಮಾದರಿಯಾಗಿವೆ ಎಂದರು.

ಸಂಸ್ಥೆಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿ ಆಶ್ರಮವು ಬೆಳೆದು ಬಂದ ಹಾದಿ ಹಾಗೂ ಸದ್ಯದ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ನೀಡಿದರು. ಲೆಕ್ಕಾಧಿಕಾರಿ ಸೌಮ್ಯ ಯು.ಪಿ. ವಾರ್ಷಿಕ ವರದಿ ಮಂಡಿಸಿದರು.

ವಿಶೇಷತೆಗಳು:

* ಆಶ್ರಮದ ನಿವಾಸಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಿದ್ದ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

* ಕಾರ್ಯಕ್ರಮದಲ್ಲಿ ಆಶ್ರಮದ ಹಿತೈಷಿಗಳು, ವೈದ್ಯಾಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

* ಆಡಳಿತಾಧಿಕಾರಿ ಶೋಭಾ ಯು.ಪಿ. ಸ್ವಾಗತಿಸಿ, ಆಶಾಸುಧಾಕರ್ ವಂದಿಸಿದರು. ದಿನಾವತಿಯವರು ಕಾರ್ಯಕ್ರಮ ನಿರೂಪಿಸಿದರು.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page