May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯ ಪ್ರತಿಭೆ ಜೋಷ್ಮಾ ಲೀರಾ ಮೊನಿಸ್‌ ಅವರಿಗೆ ಪುಣೆ ವಿವಿಯ ಕಾನೂನು ಪದವಿಯಲ್ಲಿ 3ನೇ ರ್‍ಯಾಂಕ್

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪ್ರತಿಭಾನ್ವಿತ ಯುವತಿ ಜೋಷ್ಮಾ ಲೀರಾ ಮೊನಿಸ್ ಅವರು ಮಹಾರಾಷ್ಟ್ರದ ಪ್ರತಿಷ್ಠಿತ ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದ ಕಾನೂನು ಪದವಿ ಪರೀಕ್ಷೆಯಲ್ಲಿ ಸಮಗ್ರವಾಗಿ 3ನೇ ರ್‍ಯಾಂಕ್ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕುಟುಂಬದ ಹಿನ್ನೆಲೆ:

ಜೋಷ್ಮಾ ಲೀರಾ ಅವರು ಗರ್ಡಾಡಿಯ ಜೆರಾಲ್ಡ್ ಮೊನಿಸ್ ಪರಿಮುಖ ಹಾಗೂ ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಲೀನಾ ಪಿರೇರಾ ದಂಪತಿಯ ಪುತ್ರಿ.

ಗ್ರಾಮೀಣ ಭಾಗದ ಪ್ರತಿಭೆಯಾಗಿ ಬೆಳೆದು, ಹೊರರಾಜ್ಯದ ಪ್ರಸಿದ್ಧ ವಿಶ್ವವಿದ್ಯಾಲಯದಲ್ಲಿ ಉನ್ನತ ಸಾಧನೆ ಮಾಡಿರುವ ಜೋಷ್ಮಾ ಅವರ ಈ ಸಾಧನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಇವರ ಸಾಧನೆಯು ಜಿಲ್ಲೆಯ ಹಾಗೂ ತಾಲೂಕಿನ ಕಾನೂನು ಆಸಕ್ತ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.

You may also like

News

ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ

ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ

You cannot copy content of this page