April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತೊಕ್ಕೊಟ್ಟು ರೌಡಿಶೀಟರ್ ಹತ್ಯೆ ಪ್ರಕರಣ: ಬುಡೋಳಿಯಲ್ಲಿ ಪತ್ತೆಯಾಯ್ತು ಹಂತಕರು ಬಳಸಿದ್ದ ಕಾರು!

ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಕಾರು ವಶಪಡಿಸಿಕೊಂಡ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ

ತೊಕ್ಕೊಟ್ಟು ಫ್ಲೈಓವರ್ ಮೇಲೆ ಇಂದು ಮಾರ್ಚ್ 27ರಂದು ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರು ಪತ್ತೆಯಾದ ಹಿನ್ನೆಲೆ:

ಆರಿಫ್‌ನನ್ನು ಬೈಕ್‌ನಿಂದ ಕೆಡವಿ ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ಅಲರ್ಟ್ ಆಗಿದ್ದ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಈ ನಡುವೆ ಬಂಟ್ವಾಳದ ಬುಡೋಳಿಯಲ್ಲಿ ಶಂಕಾಸ್ಪದ ಕಾರು ಇರುವ ಬಗ್ಗೆ ಮಾಹಿತಿ ಲಭಿಸಿದೆ. ಕೂಡಲೇ ಕಾರ್ಯಪ್ರವೃತ್ತರಾದ ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಸ್ಥಳಕ್ಕೆ ದೌಡಾಯಿಸಿ, ಕಾರನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಪ್ರಕರಣದ ಸಂಕ್ಷಿಪ್ತ ವಿವರ:

* ಸ್ಥಳ: ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗ.

* ಮೃತ ವ್ಯಕ್ತಿ: ಆರಿಫ್ (46), ತಲಪಾಡಿಯ ಮುಳ್ಳುಗುಡ್ಡೆ ನಿವಾಸಿ (ರೌಡಿಶೀಟರ್).

* ಕೃತ್ಯದ ರೀತಿ: ಬೈಕ್‌ನಲ್ಲಿ ತೆರಳುತ್ತಿದ್ದ ಆರಿಫ್‌ಗೆ ಕಾರಿನಲ್ಲಿ ಬಂದು ಢಿಕ್ಕಿ ಹೊಡೆದ ದುಷ್ಕರ್ಮಿಗಳು, ಆತ ಕೆಳಗೆ ಬಿದ್ದ ತಕ್ಷಣ ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಕಡಿದು ಕೊಲೆ ಮಾಡಿದ್ದಾರೆ.

ಪೊಲೀಸ್ ಕಾರ್ಯಾಚರಣೆ: ಪ್ರಸ್ತುತ ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪತ್ತೆಯಾದ ಕಾರಿನ ಆಧಾರದ ಮೇಲೆ ಹಂತಕರ ಪತ್ತೆಗಾಗಿ ಬಲೆ ಬೀಸಿದ್ದಾರೆ. ವಿಟ್ಲ ಪೊಲೀಸರು ವಶಪಡಿಸಿಕೊಂಡ ಕಾರನ್ನು ಮುಂದಿನ ತನಿಖೆಗಾಗಿ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.

You may also like

News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ
News

ಜಗದ್ಗುರು ಪೋಪ್ 14ನೇ ಲಿಯೋ ಅವರ ವಿರುದ್ಧ ಟ್ರಂಪ್ ಅವಹೇಳನಕಾರಿ ಹೇಳಿಕೆ – ಮಂಗಳೂರು ಧರ್ಮಕ್ಷೇತ್ರದಿಂದ ತೀವ್ರ ಖಂಡನೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ಜೆ.ಬಿ. ಸಲ್ಡಾನ್ಹಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ವಿಶ್ವದ ಕೋಟ್ಯಂತರ ಕ್ರೈಸ್ತ ವಿಶ್ವಾಸಿಗಳ ಪರಮೋಚ್ಛ ಗುರುಗಳಾದ ಪೋಪ್ 14ನೇ

You cannot copy content of this page