July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಿನ್ನೆಸ್ ದಾಖಲೆಗೆ ಸಜ್ಜಾದ ‘ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ’ -ಏಪ್ರಿಲ್ 10ಕ್ಕೆ ಲಾಂಛನ ಬಿಡುಗಡೆ

ಕೊಂಕಣಿ ಸಂಸ್ಕೃತಿಯ ರಾಯಭಾರಿ ಸಂಸ್ಥೆಯಾದ ‘ಮಾಂಡ್ ಸೊಭಾಣ್’ ತನ್ನ 40ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಈ ಐತಿಹಾಸಿಕ ಸಂದರ್ಭದಲ್ಲಿ ‘ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ’ ವನ್ನು ಆಯೋಜಿಸಿದೆ. ಈ ಬೃಹತ್ ಕಾರ್ಯಕ್ರಮದ ಮುಹೂರ್ತ ಹಾಗೂ ಲಾಂಛನ ಬಿಡುಗಡೆ ಸಮಾರಂಭವು ಏಪ್ರಿಲ್ 10 ರಂದು ಶುಕ್ರವಾರ, ಸಂಜೆ 4:00 ಗಂಟೆಗೆ ಶಕ್ತಿನಗರದ ಕಲಾಂಗಣದಲ್ಲಿ ಜರುಗಲಿದೆ.

ಪ್ರಮುಖ ಅತಿಥಿಗಳು:

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್ ಆಗಮಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕೃತ ಲಾಂಛನವನ್ನು ಬಿಡುಗಡೆಗೊಳಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಗೋವಾದ ಖ್ಯಾತ ಕಲಾವಿದ ಮೈಕಲ್ ಗ್ರೇಶಿಯಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು.

ವಿಶ್ವ ದಾಖಲೆಯ ಗುರಿ:

ನವೆಂಬರ್ 03 ರಿಂದ 15 ರವರೆಗೆ ಮಂಗಳೂರಿನಲ್ಲಿ ನಡೆಯಲಿರುವ ಈ ಮಹಾ ಸಮಾವೇಶವು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿದೆ:

* ಗಿನ್ನೆಸ್ ದಾಖಲೆಯ ಪ್ರಯತ್ನ: ಸತತ 12 ದಿನ, 12 ಗಂಟೆ, 12 ನಿಮಿಷಗಳ ಕಾಲಸಮೂಹ ಗಾಯನ ನಡೆಸುವ ಮೂಲಕ ಅತೀ ದೀರ್ಘ ಅವಧಿಯ ಸಂಗೀತ ಕಾರ್ಯಕ್ರಮದ ವಿಶ್ವ ದಾಖಲೆ ಬರೆಯಲು ಸಿದ್ಧತೆ ನಡೆಸಲಾಗಿದೆ.

* ಬೃಹತ್ ಭಾಗವಹಿಸುವಿಕೆ: ದೇಶ-ವಿದೇಶಗಳ ಸುಮಾರು 6,000ಕ್ಕೂ ಹೆಚ್ಚು ಹಾಡುಗಾರರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

* ವೈವಿಧ್ಯತೆ: ಕೊಂಕಣಿಯ ವಿವಿಧ ಸಮುದಾಯಗಳಾದ ಕ್ರೈಸ್ತ, ಜಿಎಸ್‌ಬಿ, ಸಿದ್ದಿ, ದಾಲ್ದಿ, ಕುಡ್ಮಿ ಸೇರಿದಂತೆ ಹಲವು ಪಂಗಡಗಳ ಗಾಯಕರು ಸುಮಾರು 5,000 ಕೊಂಕಣಿ ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಇತರ ಆಕರ್ಷಣೆಗಳು:

ಈ ಸಮಾವೇಶವು ಕೇವಲ ಸಂಗೀತಕ್ಕೆ ಸೀಮಿತವಾಗದೆ, ಸಂಗೀತ ಸಂವಾದ ಗೋಷ್ಠಿಗಳು, ಸಾಧಕರಿಗೆ ಸನ್ಮಾನ, ಕೀರ್ತಿ ಮಂದಿರ ಹಾಗೂ ಸಂಗೀತ-ಸಂಸ್ಕೃತಿಗೆ ಸಂಬಂಧಿಸಿದ ವಸ್ತುಪ್ರದರ್ಶನಗಳನ್ನು ಒಳಗೊಂಡಿರಲಿದೆ. ಕೊಂಕಣಿ ಸಂಗೀತದ ದಿಗ್ಗಜ ಎರಿಕ್ ಒಝೇರಿಯೊ ಅವರಿಗೆ ಅರ್ಪಣೆಯಾಗಿ ಈ ಬೃಹತ್ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಲಾಗಿದೆ.

ಪತ್ರಿಕಾ ಗೋಷ್ಠಿಯಲ್ಲಿ ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ. ಪಿಂಟೊ, ಕಲಾಂಗಣ್ ಪಿರ್ಜೆಂತ್ ರೊಯ್ ಕ್ಯಾಸ್ತೆಲಿನೊ, ಸಂಗೀತ ನಿರ್ದೇಶಕ ಜೊಯೆಲ್ ಪಿರೇರಾ, ಮಾಂಡ್ ಸೊಭಾಣ್ ಸಂಘಟಕ ಸ್ಟ್ಯಾನಿ ಆಲ್ವಾರಿಸ್, ಮಾಂಡ್ ಸೊಭಾಣ್ ಉಪಾಧ್ಯಕ್ಷ ನವೀನ್ ಲೋಬೊ ಮತ್ತು ಕಾರ್ಯದರ್ಶಿ ರೊನಾಲ್ಡ್ ಕ್ರಾಸ್ತಾ ಉಪಸ್ಥಿತರಿದ್ದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page