July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MLC ಐವನ್ ಡಿಸೋಜ ಶಿಫಾರಸು – 8 ಜನ ಫಲಾನುಭವಿಗಳಿಗೆ 4.15 ಲಕ್ಷ ರೂಪಾಯಿ ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆ

ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರ ವಿಶೇಷ ಶಿಫಾರಸಿನ ಮೇರೆಗೆ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 8 ಮಂದಿ ಅರ್ಹ ಅರ್ಜಿದಾರರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 4,15,502 ರೂಪಾಯಿ ಪರಿಹಾರ ಧನ ಮಂಜೂರಾಗಿದ್ದು, ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ.

ಮಂಗಳೂರಿನಲ್ಲಿರುವ ವಿಧಾನ ಪರಿಷತ್ ಸದಸ್ಯರ ಕಚೇರಿಯಲ್ಲಿ ಪರಿಹಾರ ಧನದ ಬಿಡುಗಡೆ ಪತ್ರವನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಸಹಾಯಧನ ಪಡೆದ ವಿವರಗಳು ಈ ಕೆಳಗಿನಂತಿವೆ:

 

ಫಲಾನುಭವಿಗಳ ವಿವರ:

* ಅರುಣಾ ಐ., ಸುರತ್ಕಲ್: 95,290 ರೂಪಾಯಿ

* ನಬಿಸಾ, ಸುಳ್ಯ: 79,747 ರೂಪಾಯಿ

* ಕುಮಾರಿ ಪಾಯಲ್ ಸುವರ್ಣ, ಕುಲಶೇಖರ: 62,788 ರೂಪಾಯಿ

* ಅಬ್ದುಲ್ ಖಾದರ್, ಮಂಗಳೂರು: 59,066 ರೂಪಾಯಿ

* ಪುಷ್ಪಲತಾ, ಕುದ್ರೋಳಿ: 31,893 ರೂಪಾಯಿ

* ಹೈದರ್ ಅಬ್ದುಲ್ ರೆಹಮಾನ್: 32,835 ರೂಪಾಯಿ

* ರಂಜಿತ್ ಜಿ.: 25,000 ರೂಪಾಯಿ

* ಹಮೀದ್, ಮಂಗಳೂರು: 22,685 ರೂಪಾಯಿ

* ಮಾಲತಿ ಕುಂದರ್, ಮಂಗಳೂರು: 6,193 ರೂಪಾಯಿ

ಅನಾರೋಗ್ಯದಿಂದ ಸಂಕಷ್ಟಕ್ಕೀಡಾದ ಬಡ ಕುಟುಂಬಗಳಿಗೆ ಈ ಪರಿಹಾರ ಧನವು ಚಿಕಿತ್ಸಾ ವೆಚ್ಚ ಭರಿಸಲು ಆಸರೆಯಾಗಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page