July 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಾವು ಕಚ್ಚಿ 2.5 ವರ್ಷದ ಮಗು ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಎಸ್‌ಎನ್ ನಗರದಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗು ಹಾವು ಕಚ್ಚಿ ಮೃತಪಟ್ಟಿದೆ.

ಮೃತ ಮಗುವನ್ನು ಭವಿನ್ ಎಂದು ಗುರುತಿಸಲಾಗಿದ್ದು, ಇವರು ಗಣೇಶ್ ಅವರ ಪುತ್ರ. ರಜೆ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಅಜ್ಜಿ ಮನೆಗೆ ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಟವಾಡುತ್ತಿದ್ದಾಗ ಮಗುವಿನ ಕೈಗೆ ನಾಗರಹಾವು ಕಚ್ಚಿದುದಾಗಿ ತಿಳಿದುಬಂದಿದೆ.

ಘಟನೆ ತಿಳಿದ ತಕ್ಷಣ ಆತಂಕಗೊಂಡ ಕುಟುಂಬಸ್ಥರು ಮಗುವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರ ಎಲ್ಲಾ ಪ್ರಯತ್ನಗಳಿಗೂ ಮಧ್ಯೆ ಮಗು ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದೆ.

ಮಗುವಿನ ಮರಣೋತ್ತರ ಪರೀಕ್ಷೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ಘಟನೆ ಕುಟುಂಬದವರಲ್ಲಿ ದುಃಖದ ವಾತಾವರಣ ನಿರ್ಮಿಸಿದೆ. ಸ್ಥಳೀಯರು ಸಹ ಸಂತಾಪ ಸೂಚಿಸಿದ್ದಾರೆ.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page