July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

17 ಪ್ರಕರಣಗಳ ಆರೋಪಿ ‘ಅರ್ಗ ಬಶೀರ್’ ಬಂಧನ – 4 ವರ್ಷಗಳಿಂದ ತಲೆಮರೆಸಿಕೊಂಡಿದ್ದವನು ಮೂಡಬಿದ್ರೆ ಪೊಲೀಸರ ಬಲೆಗೆ!

ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಚಮಕ್ ನೀಡುತ್ತಾ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ 50 ವರ್ಷ ಪ್ರಾಯದ ಕೆ. ಅಬ್ದುಲ್ ಬಶೀರ್ ಅಲಿಯಾಸ್ ಅರ್ಗ ಬಶೀರ್ ಎಂಬಾತನನ್ನು ಮೂಡಬಿದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ಕಾರ್ಯಾಚರಣೆಯ ವಿವರ:

ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮದ ಆರ್ಗ ನಿವಾಸಿಯಾಗಿದ್ದ ಬಶೀರ್, ತನ್ನ ವಿರುದ್ಧ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಕುಟುಂಬ ಸಮೇತ ನಾಪತ್ತೆಯಾಗಿದ್ದನು. ಈತನು ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್‌ನ ಪರ್ಲಿಯಾ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಏಪ್ರಿಲ್ 18ರಂದು ಶನಿವಾರ ಸಂಜೆ 7.30ರ ಸುಮಾರಿಗೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯ ಮೇಲಿರುವ ಗಂಭೀರ ಪ್ರಕರಣಗಳು:

ಬಂಧಿತ ಆರೋಪಿ ಬಶೀರ್ ಒಬ್ಬ ಸರಣಿ ಅಪರಾಧಿಯಾಗಿದ್ದು, ಈತನ ವಿರುದ್ಧ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿವೆ. ಅವುಗಳ ವಿವರ ಈ ಕೆಳಗಿನಂತಿದೆ:

* ಮೂಡಬಿದ್ರೆ ಠಾಣೆ: ಗೋಹತ್ಯೆ ನಿಷೇಧ ಕಾಯ್ದೆ, ದರೋಡೆ ಯತ್ನ, ಮಾರಕಾಸ್ತ್ರ ಕಾಯ್ದೆ, ಕಿಡ್ನ್ಯಾಪ್ ಮತ್ತು ಹಲ್ಲೆ ಸೇರಿದಂತೆ ಒಟ್ಟು 7 ಪ್ರಕರಣಗಳು.

* ಬಜ್ಪೆ ಠಾಣೆ: ಕೊಲೆ ಯತ್ನ (Section 307), ದರೋಡೆ ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ 5 ಪ್ರಕರಣಗಳು.

* ಮಂಗಳೂರು ಗ್ರಾಮಾಂತರ ಠಾಣೆ: ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದ 1 ಪ್ರಕರಣ.

* ಬೆಳ್ತಂಗಡಿ ಮತ್ತು ಧರ್ಮಸ್ಥಳ ಠಾಣೆ: ಗೋಹತ್ಯೆ ಮತ್ತು ಅಕ್ರಮ ಜಾನುವಾರು ಸಾಗಾಟಕ್ಕೆ ಸಂಬಂಧಿಸಿದ ತಲಾ 1 ಪ್ರಕರಣಗಳು.

* ಕಳಸ ಠಾಣೆ (ಚಿಕ್ಕಮಗಳೂರು): ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು ಕಳ್ಳತನದ 2 ಪ್ರಕರಣಗಳು.

ನ್ಯಾಯಾಂಗ ಬಂಧನಕ್ಕೆ:

ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ಕಾರಣ ಈತನ ವಿರುದ್ಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮೂಡಬಿದ್ರೆ ಪೊಲೀಸರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page