July 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯ ಶ್ರೀ ಗುರುದೇವ ಸಹಕಾರಿ ಸಂಘಕ್ಕೆ ₹5.85 ಕೋಟಿ ಲಾಭ

ಶೀಘ್ರದಲ್ಲೇ ಹೊಸ 3 ಶಾಖೆಗಳ ಶುಭಾರಂಭ – ಅಧ್ಯಕ್ಷ ಭಗೀರಥ ಜಿ. ಪತ್ರಿಕಾಗೋಷ್ಠಿ

ಬೆಳ್ತಂಗಡಿಯ ಶ್ರೀ ಗುರುದೇವ ವಿವಿದ್ದೋದ್ದೇಶ ಸಹಕಾರಿ ಸಂಘವು 2025-26ನೇ ಹಣಕಾಸು ವರ್ಷದಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ₹1953.29 ಕೋಟಿ ಒಟ್ಟು ವ್ಯವಹಾರದೊಂದಿಗೆ ₹5.85 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಭಗೀರಥ ಜಿ. ತಿಳಿಸಿದ್ದಾರೆ. ಏಪ್ರಿಲ್ 21 ರಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಸಾಧನೆ ಮತ್ತು ಭವಿಷ್ಯದ ಯೋಜನೆಗಳ ಕುರಿತು ಪ್ರಮುಖ ಅಂಶಗಳನ್ನು ಹಂಚಿಕೊಂಡರು:

* ವಿಸ್ತರಣೆ: ಪ್ರಸ್ತುತ 27 ಶಾಖೆಗಳನ್ನು ಹೊಂದಿರುವ ಸಂಘವು, ಶೀಘ್ರದಲ್ಲೇ ಗುರುಪುರ-ಕೈಕಂಬ, ಬೆಳ್ಳಾರೆ ಮತ್ತು ಕುತ್ತಾರ್ ಪದವು ಪ್ರದೇಶಗಳಲ್ಲಿ ಹೊಸ ಶಾಖೆಗಳನ್ನು ಪ್ರಾರಂಭಿಸಲಿದೆ.

* ಆರ್ಥಿಕ ಸುಭದ್ರತೆ: ಸಂಘವು ಪ್ರಸ್ತುತ ₹326 ಕೋಟಿ ಠೇವಣಿ ಹಾಗೂ ₹269 ಕೋಟಿ ಸಾಲ ನೀಡಿಕೆಯನ್ನು ಹೊಂದಿದ್ದು, ಸತತವಾಗಿ ‘ಎ’ ತರಗತಿ ಲೆಕ್ಕಪರಿಶೋಧನಾ ಶ್ರೇಣಿಯನ್ನು ಕಾಯ್ದುಕೊಂಡಿದೆ.

* ಸಾಮಾಜಿಕ ಕಳಕಳಿ: ‘ಶ್ರೀ ಗುರು ಸಾಲಗಾರರ ಮರಣ ನಿಧಿ’ಯ ಮೂಲಕ ಈವರೆಗೆ 119 ಮೃತ ಸಾಲಗಾರರ ಕುಟುಂಬಗಳಿಗೆ ಸುಮಾರು ₹88.18 ಲಕ್ಷ ನೆರವು ನೀಡಿ ಸಾಲಮುಕ್ತಗೊಳಿಸಲಾಗಿದೆ. ಅಲ್ಲದೆ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚ ಹಾಗೂ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆಯನ್ನು ಸಂಘ ಹಮ್ಮಿಕೊಂಡಿದೆ.

* ಆಧುನಿಕ ಬ್ಯಾಂಕಿಂಗ್: ಸ್ವಂತ IFSC ಕೋಡ್, ಕೋರ್ ಬ್ಯಾಂಕಿಂಗ್ ಮತ್ತು ಸುಸಜ್ಜಿತ ಭದ್ರತಾ ವ್ಯವಸ್ಥೆಯೊಂದಿಗೆ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲಾಗುತ್ತಿದೆ.

ಕಳೆದ 17 ವರ್ಷಗಳಲ್ಲಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮನೆಮಾತಾಗಿದ್ದು, ಸತತ 9 ವರ್ಷಗಳಿಂದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಾ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಪಾತ್ರವಾಗಿದೆ ಎಂದು ಭಗೀರಥ ಜಿ. ಹೆಮ್ಮೆಯಿಂದ ಸ್ಮರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್, ನಿರ್ದೇಶಕರುಗಳಾದ ಸಂಜೀವ ಪೂಜಾರಿ, ಚಂದ್ರಶೇಖರ್, ಗಂಗಾಧರ ಮಿತ್ತಮಾರು, ಧರಣೇಂದ್ರ ಕುಮಾರ್, ಚಿದಾನಂದ ಪೂಜಾರಿ ಎಲ್ದಕ್ಕ ಉಪಸ್ಥಿತರಿದ್ದರು.

You may also like

News

ಮಂಗಳೂರಿನಲ್ಲಿ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನ; ಇಬ್ಬರು ಹಿರಿಯ ಕವಯತ್ರಿಯರಿಗೆ ಗೌರವ – ರೇಮಂಡ್ ಡಿಕುನಾ ತಾಕೊಡೆ

ಮಂಗಳೂರಿನಲ್ಲಿ ಜುಲೈ 19ರಂದು ಭಾನುವಾರ ನಡೆಯಲಿರುವ 5ನೇ ರಾಷ್ಟ್ರೀಯ ಕೊಂಕಣಿ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳೂರಿನ ಹಿರಿಯ ಕವಯತ್ರಿ ಅರುಂಧತಿ ವಿ. ರಾವ್ ಹಾಗೂ ಗೋವಾದ ಹಿರಿಯ
News

Mangalore Diocese Equips Parish Convenors to Strengthen Inter-Religious Harmony

The Inter-Religious Dialogue Commission of the Diocese of Mangalore conducted a training programme for Parish Convenors on Sunday at the

You cannot copy content of this page