July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯ ಶ್ರೀ ಗುರುದೇವ ಸಹಕಾರಿ ಸಂಘಕ್ಕೆ ₹5.85 ಕೋಟಿ ಲಾಭ

ಶೀಘ್ರದಲ್ಲೇ ಹೊಸ 3 ಶಾಖೆಗಳ ಶುಭಾರಂಭ – ಅಧ್ಯಕ್ಷ ಭಗೀರಥ ಜಿ. ಪತ್ರಿಕಾಗೋಷ್ಠಿ

ಬೆಳ್ತಂಗಡಿಯ ಶ್ರೀ ಗುರುದೇವ ವಿವಿದ್ದೋದ್ದೇಶ ಸಹಕಾರಿ ಸಂಘವು 2025-26ನೇ ಹಣಕಾಸು ವರ್ಷದಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ₹1953.29 ಕೋಟಿ ಒಟ್ಟು ವ್ಯವಹಾರದೊಂದಿಗೆ ₹5.85 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಭಗೀರಥ ಜಿ. ತಿಳಿಸಿದ್ದಾರೆ. ಏಪ್ರಿಲ್ 21 ರಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಸಾಧನೆ ಮತ್ತು ಭವಿಷ್ಯದ ಯೋಜನೆಗಳ ಕುರಿತು ಪ್ರಮುಖ ಅಂಶಗಳನ್ನು ಹಂಚಿಕೊಂಡರು:

* ವಿಸ್ತರಣೆ: ಪ್ರಸ್ತುತ 27 ಶಾಖೆಗಳನ್ನು ಹೊಂದಿರುವ ಸಂಘವು, ಶೀಘ್ರದಲ್ಲೇ ಗುರುಪುರ-ಕೈಕಂಬ, ಬೆಳ್ಳಾರೆ ಮತ್ತು ಕುತ್ತಾರ್ ಪದವು ಪ್ರದೇಶಗಳಲ್ಲಿ ಹೊಸ ಶಾಖೆಗಳನ್ನು ಪ್ರಾರಂಭಿಸಲಿದೆ.

* ಆರ್ಥಿಕ ಸುಭದ್ರತೆ: ಸಂಘವು ಪ್ರಸ್ತುತ ₹326 ಕೋಟಿ ಠೇವಣಿ ಹಾಗೂ ₹269 ಕೋಟಿ ಸಾಲ ನೀಡಿಕೆಯನ್ನು ಹೊಂದಿದ್ದು, ಸತತವಾಗಿ ‘ಎ’ ತರಗತಿ ಲೆಕ್ಕಪರಿಶೋಧನಾ ಶ್ರೇಣಿಯನ್ನು ಕಾಯ್ದುಕೊಂಡಿದೆ.

* ಸಾಮಾಜಿಕ ಕಳಕಳಿ: ‘ಶ್ರೀ ಗುರು ಸಾಲಗಾರರ ಮರಣ ನಿಧಿ’ಯ ಮೂಲಕ ಈವರೆಗೆ 119 ಮೃತ ಸಾಲಗಾರರ ಕುಟುಂಬಗಳಿಗೆ ಸುಮಾರು ₹88.18 ಲಕ್ಷ ನೆರವು ನೀಡಿ ಸಾಲಮುಕ್ತಗೊಳಿಸಲಾಗಿದೆ. ಅಲ್ಲದೆ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚ ಹಾಗೂ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆಯನ್ನು ಸಂಘ ಹಮ್ಮಿಕೊಂಡಿದೆ.

* ಆಧುನಿಕ ಬ್ಯಾಂಕಿಂಗ್: ಸ್ವಂತ IFSC ಕೋಡ್, ಕೋರ್ ಬ್ಯಾಂಕಿಂಗ್ ಮತ್ತು ಸುಸಜ್ಜಿತ ಭದ್ರತಾ ವ್ಯವಸ್ಥೆಯೊಂದಿಗೆ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲಾಗುತ್ತಿದೆ.

ಕಳೆದ 17 ವರ್ಷಗಳಲ್ಲಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮನೆಮಾತಾಗಿದ್ದು, ಸತತ 9 ವರ್ಷಗಳಿಂದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಾ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಪಾತ್ರವಾಗಿದೆ ಎಂದು ಭಗೀರಥ ಜಿ. ಹೆಮ್ಮೆಯಿಂದ ಸ್ಮರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್, ನಿರ್ದೇಶಕರುಗಳಾದ ಸಂಜೀವ ಪೂಜಾರಿ, ಚಂದ್ರಶೇಖರ್, ಗಂಗಾಧರ ಮಿತ್ತಮಾರು, ಧರಣೇಂದ್ರ ಕುಮಾರ್, ಚಿದಾನಂದ ಪೂಜಾರಿ ಎಲ್ದಕ್ಕ ಉಪಸ್ಥಿತರಿದ್ದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page