August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂತ ಫ್ರಾನ್ಸಿಸ್ ಕ್ಸೇವಿಯರ್ ವಿರುದ್ಧ ಅವಹೇಳನಕಾರಿ ಹೇಳಿಕೆ : ಗೌತಮ್ ಕಟ್ಟರ್ ನನ್ನು ಕೂಡಲೇ ಗಡಿಪಾರು ಮಾಡಬೇಕು – ಸ್ಟ್ಯಾನಿ ಪಿಂಟೋ ಬೆಂಗಳೂರು

ಆಕ್ರೋಶ ಬಹಿರಂಗ ಪಡಿಸಿದ ಕರ್ನಾಟಕ ಕ್ರೈಸ್ತ ಸಂಘಟನೆ

ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪಕ್ಕೆ ದೇಶದ ವಿವಿಧ ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕರ್ನಾಟಕ ಕ್ರೈಸ್ತ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ಬೆಂಗಳೂರು ಅವರು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ಆರೋಪಿಯಾಗಿರುವ ಗೌತಮ್ ಕಟ್ಟರ್ ಅವನನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಗೋವಾ ಸರಕಾರವನ್ನು ಒತ್ತಾಯಿಸಿದ್ದಾರೆ.

ಘಟನೆಯ ವಿವರ:

ಏಪ್ರಿಲ್ ತಿಂಗಳಲ್ಲಿ ಗೋವಾದ ವಾಸ್ಕೋದಲ್ಲಿ ನಡೆದ ‘ಭಗವಾನ್ ಪರಶುರಾಮ ಜನ್ಮೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗೌತಮ್ ಕಟ್ಟರ್, ಗೋವಾದ ರಕ್ಷಕ ಸಂತರೆಂದು ಗೌರವಿಸಲ್ಪಡುವ ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರನ್ನು ಅವಹೇಳನಕಾರಿ ಪದಗಳಿಂದ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಈ ಹೇಳಿಕೆ ಕ್ರೈಸ್ತ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ ಎಂಬ ಆರೋಪ ಕೇಳಿಬಂದಿದೆ.

 

ವ್ಯಾಪಕ ವಿರೋಧ:ಈ ಹೇಳಿಕೆಗೆ ಗೋವಾ ಸೇರಿದಂತೆ ದೇಶದ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ವಿವಿಧ ಕ್ರೈಸ್ತ ಸಂಘಟನೆಗಳು ಮತ್ತು ರಾಜಕೀಯ ನಾಯಕರು ಪೊಲೀಸ್ ದೂರು ದಾಖಲಿಸಿದ್ದು, ಪ್ರಕರಣವನ್ನು ಗೋವಾ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ. ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಪ್ರಯತ್ನ ಇದಾಗಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಕಠಿಣ ಕ್ರಮಕ್ಕೆ ಆಗ್ರಹ:

“ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರು ಭಾರತದ ಆಧ್ಯಾತ್ಮಿಕ ಇತಿಹಾಸದಲ್ಲಿ ವಿಶಿಷ್ಟ ಸ್ಥಾನ ಹೊಂದಿದ್ದಾರೆ. ಇಂತಹ ಮಹಾನ್ ವ್ಯಕ್ತಿತ್ವವನ್ನು ಅವಹೇಳನ ಮಾಡುವುದು ಅಕ್ಷಮ್ಯ. ಕೂಡಲೇ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅವರು ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಬೇಕು” ಎಂದು ಸ್ಟ್ಯಾನಿ ಪಿಂಟೋ ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಧಾರ್ಮಿಕ ಸೌಹಾರ್ದತೆಗೆ ಕರೆ:

ಈ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಧಾರ್ಮಿಕ ಭಾವನೆಗಳಿಗೆ ಗೌರವ ನೀಡುವಂತೆ ಹಾಗೂ ಸಮಾಜದಲ್ಲಿ ಶಾಂತಿ-ಸೌಹಾರ್ದತೆ ಕಾಪಾಡುವಂತೆ ಸಂಘಟನೆಗಳು ಕರೆ ನೀಡಿದ್ದಾರೆ.

ಸದ್ಯ ಈ ವಿವಾದವು ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳುವತ್ತ ಎಲ್ಲರ ಗಮನ ನೆಟ್ಟಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page