August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದ್ವಿತೀಯ ಪಿಯುಸಿ ಫಲಿತಾಂಶ – ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿಗೆ ಶೇ. 98.05 ಯಶಸ್ಸು

ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಪ್ರಾಂಶುಪಾಲರಾದ ಭಗಿನಿ ನೊರಿನ್ ಡಿಸೋಜ

2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳೂರು ನಗರದ ಪ್ರತಿಷ್ಠಿತ ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜು ಶೇಕಡಾ 98.05% ರಷ್ಟು ಅತ್ಯುತ್ತಮ ಫಲಿತಾಂಶ ದಾಖಲಿಸಿ, ಶೈಕ್ಷಣಿಕ ಸಾಧನೆಯಲ್ಲಿ ತನ್ನ ಪಾರಮ್ಯವನ್ನು ಮುಂದುವರಿಸಿದೆ.

ರಾಜ್ಯ ಮಟ್ಟದ ರ‍್ಯಾಂಕ್ ವಿಜೇತರು:

ಕಾಲೇಜಿನ ಮೂರೂ ವಿಭಾಗಗಳ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಪಟ್ಟಿಯಲ್ಲಿ ಸ್ಥಾನ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ:

* ವಿಜ್ಞಾನ ವಿಭಾಗ : ರಿಯಾ ಆ್ಯನ ಮೆಂಡೋನ್ಸ ಅವರು 595 (99%) ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದಿದ್ದಾರೆ. ಇವರು ಹಿಂದಿ, ಭೌತಶಾಸ್ತ್ರ, ಗಣಿತ ಮತ್ತು ಗಣಕಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ್ದಾರೆ.

* ವಾಣಿಜ್ಯ ವಿಭಾಗ : ವಿಯೋಲಾ ರಿಶಾ ಫೆರ್ನಾಂಡಿಸ್ ಅವರು 593 (98%) ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಹಾಗೂ ರಾಜ್ಯಕ್ಕೆ 8ನೇ ರ‍್ಯಾಂಕ್ ಅಲಂಕರಿಸಿದ್ದಾರೆ. ಇವರು ವ್ಯವಹಾರ ಅಧ್ಯಯನ, ಮೂಲಗಣಿತ ಮತ್ತು ಸಂಖ್ಯಾಶಾಸ್ತ್ರದಲ್ಲಿ 100 ಅಂಕ ಪಡೆದಿದ್ದಾರೆ.

* ಮಾನವಿಕ ವಿಭಾಗ : ಪ್ರತೀಕ್ಷ ಎನ್. ರಾವ್ ಅವರು 587 (97.83%) ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಹಾಗೂ ರಾಜ್ಯಕ್ಕೆ 12ನೇ ಸ್ಥಾನ ಪಡೆದಿದ್ದಾರೆ. ಇವರು ಅರ್ಥಶಾಸ್ತ್ರದಲ್ಲಿ 100 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ಸಾಧನೆಯ ಹಾದಿಯಲ್ಲಿ ಮತ್ತಷ್ಟು ಮೈಲಿಗಲ್ಲು:

* ಶ್ರೇಣಿವಾರು ಸಾಧನೆ: ಒಟ್ಟು 202 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ (Distinction) ಹಾಗೂ 283 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

* ವಿಷಯವಾರು ಶತಕ: ವಿವಿಧ ವಿಷಯಗಳಲ್ಲಿ ಒಟ್ಟು 75 ಶತಕಗಳು ದಾಖಲಾಗಿರುವುದು ಕಾಲೇಜಿನ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ.

ಛಲಬಿಡದ ಸಾಧಕಿ – ಖದೀಜಾ ಸಹ್ಲಾ:

ಸ್ನಾಯು ದೌರ್ಬಲ್ಯದ (Muscular Dystrophy) ಕಠಿಣ ಕಾಯಿಲೆಯಿಂದ ಬಳಲುತ್ತಿದ್ದರೂ, ಧೈರ್ಯಗೆಡದೆ ಪರೀಕ್ಷೆ ಎದುರಿಸಿದ ಖದೀಜಾ ಸಹ್ಲಾ ಅವರು 514 (86%) ಅಂಕಗಳನ್ನು ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಇವರ ಈ ಅಪ್ರತಿಮ ಛಲಕ್ಕೆ ಕಾಲೇಜು ಮಂಡಳಿ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದೆ.

ವಿದ್ಯಾರ್ಥಿನಿಯರ ಈ ಅಮೋಘ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ನೊರಿನ್ ಡಿಸೋಜ, ಉಪ ಪ್ರಾಂಶುಪಾಲರಾದ ಭಗಿನಿ ಜಾನೆಟ್ ಸಿಕ್ವೇರಾ, ಆಡಳಿತ ಮಂಡಳಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page