July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನ್ಯಾಯಾಂಗ ನೌಕರರಿಗೆ ಸಿವಿಲ್ ಜಡ್ಜ್ ಪರೀಕ್ಷೆಗೆ ದಾರಿ – ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಕರ್ನಾಟಕದಲ್ಲಿ ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಾನೂನು ಪದವಿಧರ ನೌಕರರಿಗೆ ಸಿವಿಲ್ ಜಡ್ಜ್ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡುವ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನೀಡಿದೆ. ಈ ತೀರ್ಪು ನ್ಯಾಯಾಂಗ ಸೇವೆಯಲ್ಲಿರುವ ಹಲವಾರು ನೌಕರರಿಗೆ ಹೊಸ ಅವಕಾಶಗಳ ಬಾಗಿಲು ತೆರೆಯುವಂತಾಗಿದೆ.

90 ಸಿವಿಲ್ ಜಡ್ಜ್ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ್ದ ಅಧಿಸೂಚನೆಯಲ್ಲಿ, ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ (In-service) ಕಾನೂನು ಪದವಿಧರ ನೌಕರರಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಹಲವರು ಹೈಕೋರ್ಟ್ ಮೊರೆ ಹೋಗಿದ್ದರು.

 

ಈ ಸಂಬಂಧ ನ್ಯಾಯಾಂಗ ಇಲಾಖೆಯ 15 ನೌಕರರು ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರು ಹೀಗಿದ್ದಾರೆ:

ಯೋಗೇಶ ಬಿ., ಮೋನಿತಾ ಸ., ಮಹಾದೇವಿ ಬೊಮ್ಮನಗಿ, ಶ್ಯಾಮ್ ರಾವ್, ಗಂಗಾಧರ್, ಕಿರಣ್, ನಾಗಾರ್ಜುನ, ಶಂಕರಲಿಂಗಯ್ಯ, ಪರಪ್ಪ ಹೂಗಾರ್, ಸುದರ್ಶನ್, ಅವಿನಾಶ್, ಬಸವರಾಜು ಜೆಲ್ಲಿ, ಮಂಜುನಾಥ್ ಕೆ., ವಿಜಯಲಕ್ಷ್ಮಿ, ಪ್ರೀತಿ.

ಈ ಅರ್ಜಿದಾರರ ಪರವಾಗಿ ವಕೀಲ ವೈಭವ್ ಮಳಿಮಠ್ ಅವರು ವಾದ ಮಂಡಿಸಿದರು. ಅವರ ವಾದವನ್ನು ಪರಿಗಣಿಸಿದ ಗೌರವಾನ್ವಿತ ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠವು IA 1/2026 ಪ್ರಕರಣದಲ್ಲಿ ಮಹತ್ವದ ಆದೇಶ ನೀಡಿದೆ.

ತೀರ್ಪಿನ ಪ್ರಕಾರ, ಅರ್ಜಿದಾರರಿಗೆ ಸಿವಿಲ್ ಜಡ್ಜ್ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇದರಿಂದ ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಕಾನೂನು ಪದವಿಧರ ನೌಕರರಿಗೆ ಸಮಾನ ಅವಕಾಶ ಸಿಗುವಂತಾಗಿದೆ.

ಈ ತೀರ್ಪು ನ್ಯಾಯಾಂಗ ಕ್ಷೇತ್ರದಲ್ಲಿ ಸಮಾನತೆ ಮತ್ತು ನ್ಯಾಯತತ್ವವನ್ನು ಬಲಪಡಿಸುವುದರ ಜೊತೆಗೆ, ಸೇವೆಯಲ್ಲಿರುವ ನೌಕರರ ಉನ್ನತಿಗೆ ಸಹಕಾರಿಯಾಗಲಿದೆ ಎಂದು ಕಾನೂನು ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page