July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲಾಪು–ತೊಕ್ಕೊಟ್ಟು ಪ್ರದೇಶದಲ್ಲಿ ಮ್ಯಾಂಗ್ರೋವ್ ನೆಡುವ ಅಭಿಯಾನ – ಯುವಕರಿಂದ 5000 ಗಿಡಗಳ ನೆಡುವಿಕೆ

ಮಂಗಳೂರು ಧರ್ಮಕ್ಷೇತ್ರದ ICYM ಕೇಂದ್ರೀಯ ಸಮಿತಿಯ ಮುಂದಾಳತ್ವ

ಮಂಗಳೂರು ಧರ್ಮಕ್ಷೇತ್ರದ ಭಾರತೀಯ ಕಥೋಲಿಕ ಯುವ ಸಂಚಲನ, ಮಂಗಳೂರು ಅರಣ್ಯ ಇಲಾಖೆ ವಿಭಾಗ ಹಾಗೂ ಐಸಿವೈಎಮ್ ಇಸಿಡಿ, ಸಿಟಿ ಮತ್ತು ಮಂಗಳೂರು ದಕ್ಷಿಣ ವಲಯದ ಸಹಯೋಗದಲ್ಲಿ ಕಲ್ಲಾಪು–ತೊಕ್ಕೊಟ್ಟು ಪರಿಸರದಲ್ಲಿ ಮ್ಯಾಂಗ್ರೋವ್ ಪ್ಲಾಂಟೇಶನ್ ಡ್ರೈವ್ ಯಶಸ್ವಿಯಾಗಿ ನಡೆಯಿತು. ಮೇ 3ರಂದು ಭಾನುವಾರ ಬೆಳಿಗ್ಗೆ 6ರಿಂದ 8.30 ಗಂಟೆಯವರೆಗೆ ನಡೆದ ಈ ಅಭಿಯಾನದಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ RFO ರಾಜೇಶ್, ಐಸಿವೈಎಮ್ ಕೇಂದ್ರೀಯ ಸಮಿತಿಯ ನಿರ್ದೇಶಕರಾದ ವಂದನೀಯ ಫಾದರ್ ಆಶ್ವಿನ್ ಕಾರ್ಡೊಜ, ಅಧ್ಯಕ್ಷ ವಿಜೋಯ್ ಹಾಗೂ ಕಾರ್ಯದರ್ಶಿ ಮರಿಯ ಸೇರಿದಂತೆ ಹಲವು ಯುವಕ-ಯುವತಿಯರು ಭಾಗವಹಿಸಿ ಸುಮಾರು 5000 ಮ್ಯಾಂಗ್ರೋವ್ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಕೈಜೋಡಿಸಿದರು.

ಈ ಅಭಿಯಾನವು ಕರಾವಳಿ ಪರಿಸರ ಸಂರಕ್ಷಣೆ ಹಾಗೂ ಜೈವ ವೈವಿಧ್ಯತೆಯನ್ನು ಉಳಿಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page