May 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲಾಪು–ತೊಕ್ಕೊಟ್ಟು ಪ್ರದೇಶದಲ್ಲಿ ಮ್ಯಾಂಗ್ರೋವ್ ನೆಡುವ ಅಭಿಯಾನ – ಯುವಕರಿಂದ 5000 ಗಿಡಗಳ ನೆಡುವಿಕೆ

ಮಂಗಳೂರು ಧರ್ಮಕ್ಷೇತ್ರದ ICYM ಕೇಂದ್ರೀಯ ಸಮಿತಿಯ ಮುಂದಾಳತ್ವ

ಮಂಗಳೂರು ಧರ್ಮಕ್ಷೇತ್ರದ ಭಾರತೀಯ ಕಥೋಲಿಕ ಯುವ ಸಂಚಲನ, ಮಂಗಳೂರು ಅರಣ್ಯ ಇಲಾಖೆ ವಿಭಾಗ ಹಾಗೂ ಐಸಿವೈಎಮ್ ಇಸಿಡಿ, ಸಿಟಿ ಮತ್ತು ಮಂಗಳೂರು ದಕ್ಷಿಣ ವಲಯದ ಸಹಯೋಗದಲ್ಲಿ ಕಲ್ಲಾಪು–ತೊಕ್ಕೊಟ್ಟು ಪರಿಸರದಲ್ಲಿ ಮ್ಯಾಂಗ್ರೋವ್ ಪ್ಲಾಂಟೇಶನ್ ಡ್ರೈವ್ ಯಶಸ್ವಿಯಾಗಿ ನಡೆಯಿತು. ಮೇ 3ರಂದು ಭಾನುವಾರ ಬೆಳಿಗ್ಗೆ 6ರಿಂದ 8.30 ಗಂಟೆಯವರೆಗೆ ನಡೆದ ಈ ಅಭಿಯಾನದಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ RFO ರಾಜೇಶ್, ಐಸಿವೈಎಮ್ ಕೇಂದ್ರೀಯ ಸಮಿತಿಯ ನಿರ್ದೇಶಕರಾದ ವಂದನೀಯ ಫಾದರ್ ಆಶ್ವಿನ್ ಕಾರ್ಡೊಜ, ಅಧ್ಯಕ್ಷ ವಿಜೋಯ್ ಹಾಗೂ ಕಾರ್ಯದರ್ಶಿ ಮರಿಯ ಸೇರಿದಂತೆ ಹಲವು ಯುವಕ-ಯುವತಿಯರು ಭಾಗವಹಿಸಿ ಸುಮಾರು 5000 ಮ್ಯಾಂಗ್ರೋವ್ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಕೈಜೋಡಿಸಿದರು.

ಈ ಅಭಿಯಾನವು ಕರಾವಳಿ ಪರಿಸರ ಸಂರಕ್ಷಣೆ ಹಾಗೂ ಜೈವ ವೈವಿಧ್ಯತೆಯನ್ನು ಉಳಿಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

You may also like

News

ಜಮೀನು ಮತ್ತು ಮನೆಯ ಹಂಚಿಕೆ ತಕರಾರು – ಕಾರ್ಕಳದಲ್ಲಿ ಅಣ್ಣನ ಪ್ರಾಣ ತೆಗೆದ ತಮ್ಮ!

ಆರೋಪಿ ಹೆರಾಲ್ಡ್ ಡಿಸೋಜನ ಬಂಧನ ರಕ್ತ ಸಂಬಂಧಕ್ಕಿಂತ ಆಸ್ತಿಯೇ ದೊಡ್ಡದಾಯಿತೇ? ಹೌದು ಎನ್ನುತ್ತದೆ ಕಾರ್ಕಳದ ಹಿರಿಯಂಗಡಿಯಲ್ಲಿ ನಡೆದ ಈ ಘಟನೆ. ಜಮೀನು ಮತ್ತು ಮನೆಯ ಹಂಚಿಕೆ ವಿಚಾರವಾಗಿ
News

ಬಂಟ್ವಾಳದಲ್ಲಿ ಬರೋಬ್ಬರಿ 42 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಜಪ್ತಿ : ಅಣ್ಣ-ತಮ್ಮನ ಬಂಧನ

ಬಂಟ್ವಾಳ ಗ್ರಾಮಾಂತರ ಠಾಣೆಯ PSI ಮಂಜುನಾಥ ಟಿ. ತಂಡದ ಮಿಂಚಿನ ಕಾರ್ಯಾಚರಣೆ ಬೆಂಗಳೂರಿನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬೃಹತ್ ಮೊತ್ತದ ನಿಷೇಧಿತ ಮಾದಕ ವಸ್ತುವನ್ನು ಪತ್ತೆಹಚ್ಚುವಲ್ಲಿ ಬಂಟ್ವಾಳ

You cannot copy content of this page