July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಕ್ಕ ಚೇಳ್ಯಾರು ಸಂತ ಜೋಸೆಫ್ ಪ್ರಾರ್ಥನಾ ಮಂದಿರದ ದಶಮಾನೋತ್ಸವ ಹಾಗೂ ವಾರ್ಷಿಕೋತ್ಸವ ಸಂಭ್ರಮ

“ಪ್ರಾರ್ಥನಾ ಮಂದಿರಗಳು ಮನುಷ್ಯರಲ್ಲಿ ಪ್ರೀತಿಯನ್ನು ಬಿತ್ತಬೇಕು” – ಡಾ| ಗಣೇಶ್ ಅಮಿನ್ ಸಂಕಮಾರ್

ಕಥೋಲಿಕ ತೈಲಾಗಾರ ನಿರ್ವಸಿತರ ಅಭಿವೃದ್ಧಿ ಸಮಿತಿ (ರಿ.) ಮುಕ್ಕ ಚೇಳ್ಯಾರು ಇದರ ಆಶ್ರಯದಲ್ಲಿ, ಎಂ.ಆರ್.ಪಿ.ಎಲ್. ಕಾಲನಿಯಲ್ಲಿರುವ ಸಂತ ಜೋಸೆಫರ ಪ್ರಾರ್ಥನಾ ಮಂದಿರದ ದಶಮಾನೋತ್ಸವ ಮತ್ತು ಸಂತ ಜೋಸೆಫರ ವಾರ್ಡಿನ ವಾರ್ಷಿಕೋತ್ಸವವು ಮೇ 2ರಂದು ಶನಿವಾರ ಅತ್ಯಂತ ವಿಜ್ರಂಭಣೆಯಿಂದ ಜರುಗಿತು.

ಪವಿತ್ರ ಬಲಿ ಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನಗಳು:

ಬೆಳಿಗ್ಗೆ 10:30ಕ್ಕೆ ಪವಿತ್ರ ಬಲಿ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಸುರತ್ಕಲ್ ಸಂತ ಮದರ್ ತೆರೇಜಾ ವಲಯದ ಶ್ರೇಷ್ಠ ಗುರುಗಳಾದ ಅತೀ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಪೂಜೆಯ ನೇತೃತ್ವ ವಹಿಸಿದ್ದರು. ಮುಕ್ಕ ಚರ್ಚ್ ನ ಧರ್ಮಗುರುಗಳಾದ ವಂದನೀಯ ಫಾದರ್ ಸ್ಟ್ಯಾನಿ ಪಿಂಟೊ ಸೇರಿದಂತೆ ಈ ಹಿಂದೆ ಇಲ್ಲಿ ಸೇವೆ ಸಲ್ಲಿಸಿದ ವಂದನೀಯ ಫಾದರ್ ಲಾರೆನ್ಸ್ ಮಾರ್ಟಿಸ್, ವಂದನೀಯ ಫಾದರ್ ಸಿರಿಲ್ ಪಿಂಟೊ, ವಂದನೀಯ ಫಾದರ್ ಹೆರಾಲ್ಡ್ ಡಿಸೋಜ, ವಂದನೀಯ ಫಾದರ್ ನೋರ್ಬರ್ಟ್ ಲೋಬೊ ಹಾಗೂ ವಂದನೀಯ ಫಾದರ್ ಪ್ರವೀಣ್ ಡಿಸೋಜ ಉಪಸ್ಥಿತರಿದ್ದರು.

ಪ್ರವಚನ ನೀಡಿದ ಅತೀ ವಂದನೀಯ ಫಾದರ್ ಆಸ್ಟಿನ್ ಪೀಟರ್ ಪೆರಿಸ್ ಅವರು, “ಸಂತ ಜೋಸೆಫರ ಆದರ್ಶಗಳನ್ನು ಮೈಗೂಡಿಸಿಕೊಂಡು, ಜೀವನದಲ್ಲಿ ನಿಷ್ಠೆ ಮತ್ತು ಶ್ರದ್ಧಾ ಭಕ್ತಿಯನ್ನು ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಗೌರವ ಸನ್ಮಾನ ಹಾಗೂ ವರದಿ ವಾಚನ:

ಬಲಿ ಪೂಜೆಯ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ, ಕಳೆದ ಹತ್ತು ವರ್ಷಗಳಿಂದ ಮಂದಿರದ ಏಳಿಗೆಗಾಗಿ ಶ್ರಮಿಸಿದ ಧರ್ಮಗುರುಗಳು, ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಗುರಿಕಾರರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

* ಸ್ವಾಗತ: ಸೈಮನ್ ರೊಡ್ರಿಗಸ್ (ಗುರಿಕಾರರು).

* ಅಭಿವೃದ್ಧಿ ವರದಿ: ಜೆಸಿಂತಾ ರೊಡ್ರಿಗಸ್ (ಸಮಿತಿ ಕಾರ್ಯದರ್ಶಿ).

* ವಾರ್ಷಿಕ ವರದಿ: ಲೀನಾ ಮೆಂಡೋನ್ಸಾ (ವಾರ್ಡ್ ಕಾರ್ಯದರ್ಶಿ).

* ನಿರ್ವಹಣೆ: ಕುಮಾರಿ ಮ್ಯೂರಲ್ ಮತ್ತು ಕುಮಾರಿ ಏಂಜಲ್.

ಸಾಂಸ್ಕೃತಿಕ ಸಂಜೆ ಮತ್ತು ಸಾಮಾಜಿಕ ಸೇವೆ:

ಸಂಜೆ 6:30ಕ್ಕೆ ನಡೆದ ಸಾಂಸ್ಕೃತಿಕ ಸಭೆಯ ಅಧ್ಯಕ್ಷತೆಯನ್ನು ಮುಕ್ಕ ಚರ್ಚ್ ನ ಧರ್ಮಗುರು ವಂದನೀಯ ಫಾದರ್ ಸ್ಟ್ಯಾನಿ ಪಿಂಟೊ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಾಗೂ ಉದ್ಘಾಟಕರಾಗಿ ಆಗಮಿಸಿದ್ದ ಡಾ| ಗಣೇಶ್ ಅಮಿನ್ ಸಂಕಮಾರ್ ಮಾತನಾಡಿ, “ಪ್ರಾರ್ಥನಾ ಮಂದಿರಗಳು ಮನುಷ್ಯರಲ್ಲಿ ಪ್ರೀತಿಯನ್ನು ಬಿತ್ತಬೇಕು. ಕೇವಲ ವಿದ್ಯೆ ಇದ್ದರೆ ಸಾಲದು, ಬುದ್ಧಿವಂತಿಕೆಯಿಂದ ಸಾರ್ಥಕ ಬದುಕು ಕಟ್ಟಿಕೊಳ್ಳಬೇಕು” ಎಂದು ಮಾರ್ಮಿಕವಾಗಿ ನುಡಿದರು.

ಕಾರ್ಯಕ್ರಮದ ವಿಶೇಷತೆಗಳು:

* ಶೈಕ್ಷಣಿಕ ನೆರವು: 10 ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಲಾಯಿತು.

* ಆರೋಗ್ಯ ಸಹಾಯಧನ: ಅಸ್ವಸ್ಥ ಬಂಧುಗಳಿಗೆ ಆರ್ಥಿಕ ಸಹಾಯ ಹಸ್ತಾಂತರಿಸಲಾಯಿತು.

* ಸನ್ಮಾನ: ಗಣ್ಯ ಅತಿಥಿಗಳಿಗೆ ಸ್ಮರಣಿಕೆ ಮತ್ತು ಶಾಲು ಹೊದಿಸಿ ಗೌರವಿಸಲಾಯಿತು.

* ಮನೋರಂಜನೆ: ಕಲ್ಲಡ್ಕದ ‘ತುಡರ್ ಕಲಾವಿದೆರ್’ ತಂಡದಿಂದ ‘ಗಾಳಿಪಟ’ ಎಂಬ ತುಳು ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.

ಸಮಿತಿಯ ಅಧ್ಯಕ್ಷ ಫ್ರೆಡ್ರಿಕ್ ಡಿಸೋಜ ಸ್ವಾಗತಿಸಿದರು. ಸಂಚಾಲಕಿ ಪ್ರಿಯಾ ಲೋಬೊ ವಂದಿಸಿದರು. ಪ್ಲೇವಿ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವು ಭೋಜನದೊಂದಿಗೆ ಸಂಪನ್ನಗೊಂಡಿತು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page