June 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂಟರ್‌ಲಾಕ್ ಆವರಣದ ಉದ್ಘಾಟನೆ – ದಾನಿಗಳಿಗೆ ಅಭಿನಂದನಾ ಪೂರ್ವಕ ಗೌರವ ಸಮರ್ಪಣೆ

ಇಂಟರ್ ಲಾಕ್ ಅಳವಡಿಕೆಯಿಂದ ಆಸ್ಪತ್ರೆಯ ವಾತಾವರಣ ಸ್ವಚ್ಛ ಹಾಗೂ ಸುಂದರ – ಬಿ. ನರೇಂದ್ರ ರೈ ನೆಲ್ತೊಟ್ಟು

ಬಂಟ್ವಾಳ ತಾಲೂಕಿನ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿವಿಧ ದಾನಿಗಳ ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಿರ್ಮಿಸಲಾದ ಇಂಟರ್‌ಲಾಕ್ ಆವರಣದ ಉದ್ಘಾಟನೆ ಮತ್ತು ಅಭಿವೃದ್ಧಿಗೆ ಸಹಕರಿಸಿದವರಿಗೆ ಹಮ್ಮಿಕೊಳ್ಳಲಾದ ಅಭಿನಂದನಾ ಕಾರ್ಯಕ್ರಮವು ಇಂದು ಮೇ 13ರಂದು ಬುಧವಾರ ಅತ್ಯಂತ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದ ಮುಖ್ಯಾಂಶಗಳು:

  • ಉದ್ಘಾಟನೆ: ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮುಕ್ತೇಸರರು ಹಾಗೂ ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ. ನರೇಂದ್ರ ರೈ ನೆಲ್ತೊಟ್ಟು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಮಾಜದ ಆರೋಗ್ಯ ಕಾಪಾಡುವಲ್ಲಿ ದಾನಿಗಳ ಪಾತ್ರ ಹಿರಿದು ಎಂದು ಶ್ಲಾಘಿಸಿದರು.
  • ಅಧ್ಯಕ್ಷತೆ: ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಶಿಕಲಾ ಅವರು ಅಧ್ಯಕ್ಷತೆ ವಹಿಸಿ, ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕೈಜೋಡಿಸಿದ ಪ್ರತಿಯೊಬ್ಬ ದಾನಿಗಳನ್ನು ಕೃತಜ್ಞತೆಯಿಂದ ಸ್ಮರಿಸಿದರು.
  • ಗೌರವ ಸಮರ್ಪಣೆ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬಂಟ್ವಾಳ ಘಟಕ, ವಿವಿಧ ಗ್ರಾಮ ಪಂಚಾಯತ್‌ಗಳು ಹಾಗೂ ವೈಯಕ್ತಿಕವಾಗಿ ಸಹಕರಿಸಿದ ಮಾಜಿ ಸೈನಿಕರಾದ ಕೆ.ಟಿ. ನಾಯ್ಕ, ಮಾಧವ ಕುಲಾಲ್ ಮತ್ತು ಇತರ ಗಣ್ಯರನ್ನು ಈ ಸಂದರ್ಭದಲ್ಲಿ ಗೌರವಿಸಿ ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು:

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೋನಪ್ಪ ಪೂಜಾರಿ ಮೊಗರ್ನಾಡ್, ಪ್ರಗತಿಪರ ಕೃಷಿಕ ಪ್ರಪುಲ್ಲ ರೈ ಮಾಣಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ಅಶೋಕ್ ರೈ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ ಹಾಗೂ ಇಬ್ರಾಹಿಂ ಕೆ. ಮಾಣಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಾ. ಶ್ರೀನಾಥ್ ಆಳ್ವ, ಡಾ. ಮನೋಹರ್ ರೈ, ಡಾ. ಬಿ.ಎಸ್. ನಾಯಕ್, ಅನಂತಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸನತ್ ರೈ, ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಾಲ ಎಂ. ಪೆರಾಜೆ, ಪೆರ್ನೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ರಾಜೇಶ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ದಿನನಿತ್ಯ ನೂರಾರು ರೋಗಿಗಳು ಭೇಟಿ ನೀಡುವ ಈ ಕೇಂದ್ರದಲ್ಲಿ ಇಂಟರ್‌ಲಾಕ್ ಅಳವಡಿಕೆಯಿಂದಾಗಿ ಆಸ್ಪತ್ರೆಯ ಆವರಣವು ಸ್ವಚ್ಛ ಹಾಗೂ ಸುಂದರವಾಗಿ ಕಂಗೊಳಿಸುತ್ತಿದೆ ಎಂದು ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮುಕ್ತೇಸರರು ಹಾಗೂ ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ. ನರೇಂದ್ರ ರೈ ನೆಲ್ತೊಟ್ಟು ಅವರು ಹೇಳಿದರು.

ನಿರ್ವಹಣೆ:

  • ಪ್ರಾರ್ಥನೆ: ಉದಯ ಮತ್ತು ವಸುಧಾ (ಆಸ್ಪತ್ರೆ ಸಿಬ್ಬಂದಿ).
  • ಸ್ವಾಗತ ಮತ್ತು ಪ್ರಾಸ್ತಾವಿಕ: ಸುದೀಪ್ ಕುಮಾರ್ ಶೆಟ್ಟಿ (ಅಧ್ಯಕ್ಷರು ಗ್ರಾಮ ಪಂಚಾಯತ್ ಮಾಣಿ)
  • ವಂದನಾರ್ಪಣೆ: ಅರುಂಧತಿ (ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ).
  • ಕಾರ್ಯಕ್ರಮ ನಿರೂಪಣೆ: ಬಾಲಕೃಷ್ಣ ಆಳ್ವ ಕೊಡಾಜೆ (ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯತ್ ಮಾಣಿ)

ಈ ಕಾರ್ಯಕ್ರಮದಲ್ಲಿ ಮಾಣಿ, ಪೆರ್ನೆ, ಪೆರಾಜೆ ಹಾಗೂ ಅನಂತಾಡಿ ಭಾಗದ ಅನೇಕ ಗಣ್ಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

You may also like

News

ಮಂಗಳೂರಿನ ಜೆಪ್ಪು ಮತ್ತು ಮಿಲಾಗ್ರಿಸ್‌ನಲ್ಲಿ ಭಕ್ತಿಸಾಗರ – ಸಂತ ಅಂತೋನಿಯವರ ವಾರ್ಷಿಕ ಹಬ್ಬದ ಸಂಭ್ರಮ

ಕಳೆದುಹೋದ ವಸ್ತುಗಳನ್ನಷ್ಟೇ ಅಲ್ಲ, ಕಳೆದುಹೋದ ದೈವತ್ವವನ್ನು ಹುಡುಕಿಕೊಳ್ಳಿ – ಬಿಷಪ್ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಜಗತ್ಪ್ರಸಿದ್ಧ ಪವಾಡ ಪುರುಷ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವವು ನಗರದ
News

CODP Empowers 140 Students with ₹11.52 Lakh Education Aid

In a heartwarming initiative aimed at supporting higher education, the Canara Organisation for Development and Peace (CODP), the social development

You cannot copy content of this page