May 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೆಡಿಕಲ್ ಬಂದ್ – ಸಾರ್ವಜನಿಕರಿಗೆ ತೊಂದರೆಯಾಗದಂತೆ ಮಂಗಳೂರಿನಲ್ಲಿ ಪರ್ಯಾಯ ವ್ಯವಸ್ಥೆ; ಈ ನಂಬರ್‌ಗಳಿಗೆ ಕರೆ ಮಾಡಿ

ಆನ್‌ಲೈನ್ ಮೂಲಕ ಔಷಧಿಗಳ ಮಾರಾಟವನ್ನು ವಿರೋಧಿಸಿ ನಾಳೆ ಮೇ 20ರಂದು ಬುಧವಾರ ಮೆಡಿಕಲ್ ಅಂಗಡಿಗಳ ಬಂದ್‌ಗೆ ಕರೆ ನೀಡಲಾಗಿದೆ. ಆದರೆ, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ ತುರ್ತು ಔಷಧಿಗಳ ಕೊರತೆಯಾಗದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಸಹಾಯಕ ಔಷಧ ನಿಯಂತ್ರಕರ ಕಚೇರಿ ವಿಶೇಷ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿದೆ. ಬಂದ್ ದಿನದಂದು ಜಿಲ್ಲೆಯ ಹಲವು ಪ್ರಮುಖ ಫಾರ್ಮಸಿಗಳು ಮತ್ತು ಆಸ್ಪತ್ರೆಯ ಒಳಗಿನ ಔಷಧಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ತೆರೆದಿರುವ ಪ್ರಮುಖ ಔಷಧಿ ಕೇಂದ್ರಗಳು:

ಬಂದ್‌ನಿಂದ ವಿನಾಯಿತಿ ಪಡೆದು ಸಾರ್ವಜನಿಕರ ಸೇವೆಗೆ ಲಭ್ಯವಿರುವ ಮೆಡಿಕಲ್ ಅಂಗಡಿಗಳ ವಿವರ ಇಲ್ಲಿದೆ:

* ಅಪೋಲೋ ಫಾರ್ಮಸಿ: ಜಿಲ್ಲೆಯಾದ್ಯಂತ ಒಟ್ಟು 38 ಶಾಖೆಗಳು ತೆರೆದಿರುತ್ತವೆ.

* ಮೆಡ್ ಪ್ಲಸ್ ಫಾರ್ಮಸಿ: ಒಟ್ಟು 48 ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

* ಪ್ರಧಾನಮಂತ್ರಿ ಜನೌಷಧಿ ಕೇಂದ್ರ: ಬರೋಬ್ಬರಿ 130 ಕೇಂದ್ರಗಳು ಸಾರ್ವಜನಿಕರಿಗೆ ಲಭ್ಯವಿರಲಿವೆ.

* ಆಸ್ಪತ್ರೆಗಳ ಮೆಡಿಕಲ್ ಅಂಗಡಿಗಳು: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲಾ ಔಷಧಿ ಅಂಗಡಿಗಳು 24X7 ಕಾರ್ಯನಿರ್ವಹಿಸಲಿವೆ.

ತುರ್ತು ಮಾಹಿತಿಗಾಗಿ ಸಂಪರ್ಕ ಸಂಖ್ಯೆಗಳು:

ಔಷಧಿಗಳ ಲಭ್ಯತೆಯ ಬಗ್ಗೆ ಮಾಹಿತಿ ಪಡೆಯಲು ಸಾರ್ವಜನಿಕರು ಆಯಾ ಭಾಗದ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ:

ಮಂಗಳೂರು ನಗರ –  9108466827

ಮುಲ್ಕಿ, ಕಿನ್ನಿಗೋಳಿ, ಮೂಡಬಿದ್ರಿ – 6364908172, 7625081353

ಬಂಟ್ವಾಳ, ಬಿ.ಸಿ. ರೋಡ್, ವಿಟ್ಲ – 9187234432

ನೋಡಲ್ ಅಧಿಕಾರಿಗಳ ಸಂಪರ್ಕ: ಬಂದ್ ಸಂದರ್ಭದಲ್ಲಿ ಯಾವುದೇ ತುರ್ತು ನೆರವು ಅಥವಾ ದೂರುಗಳಿಗಾಗಿ ಮಂಗಳೂರಿನ ಸಹಾಯಕ ಡ್ರಗ್ಸ್ ನಿಯಂತ್ರಕರನ್ನು (ನೋಡಲ್ ಅಧಿಕಾರಿ) ಮೊಬೈಲ್: 9448205177 ಅಥವಾ ಲ್ಯಾಂಡ್ ಲೈನ್: 0824-2218451 ಮೂಲಕ ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

You may also like

News

ವಿಟ್ಲ ವಲಯದ ಶ್ರೇಷ್ಠಗುರು ಫಾದರ್ ಐವನ್ ಮೈಕಲ್ ರೊಡ್ರಿಗಸ್‌ ಅವರಿಗೆ ಮಿಲಾಗ್ರಿಸ್ ಚರ್ಚ್ ನಲ್ಲಿ ಭವ್ಯ ಸ್ವಾಗತ – ಪ್ರಧಾನ ಧರ್ಮಗುರುಗಳಾಗಿ ಅಧಿಕಾರ ಸ್ವೀಕಾರ

ಜನಮನ ಗೆದ್ದ ಧರ್ಮಗುರು ಮಿಲಾಗ್ರಿಸ್ ಚರ್ಚ್‌ನ ನಾಯಕತ್ವಕ್ಕೆ ಸರಳತೆ, ಮೃದು ಸ್ವಭಾವ ಮತ್ತು ಜನಸ್ನೇಹಿ ಧೋರಣೆಯಿಂದ ಭಕ್ತರ ಮನಸ್ಸು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಿಟ್ಲ ವಲಯದಲ್ಲಿ ಶ್ರೇಷ್ಠ
News

ಸೂರಿಕುಮೇರು ಚರ್ಚ್ ಧರ್ಮಗುರುಗಳ ಸ್ಪಷ್ಟೀಕರಣ ಸಂಪೂರ್ಣ ಸುಳ್ಳು

‘ಕರಾವಳಿ ಸುದ್ದಿ’ ವರದಿಗೆ ಹೆದರಿ ತೇಪೆ ಹಚ್ಚುವ ಕೆಲಸಕ್ಕೆ ಇಳಿದರಾ ಫಾದರ್ ಪ್ಯಾಟ್ರಿಕ್ ಸಿಕ್ವೇರಾ? ಬಿಷಪ್‌ ಅವರಿಗೆ ಲಿಖಿತ ದೂರು ನೀಡುತ್ತಿದ್ದಂತೆ ಫಾ. ಸಿಕ್ವೇರಾ ಒಂದೇ ಕುಟುಂಬದ

You cannot copy content of this page