May 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೋಕ್ಸೋ ಪ್ರಕರಣದ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ

ಪೋಕ್ಸೋ (POCSO) ಪ್ರಕರಣದಡಿ ಬಂಧಿತನಾಗಿದ್ದ ಜಾರ್ಖಂಡ್ ಮೂಲದ ಆರೋಪಿ ರೇ ಮುಂಡ ಎಂಬಾತನಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಐವರ್ಣಾಡು ಗ್ರಾಮದ ಪಾಲೇಪ್ಪಾಡಿಗೆ ತನ್ನದೇ ಊರಿನ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಬಂದು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪ ರೇ ಮುಂಡ ಎಂಬಾತನ ಮೇಲಿತ್ತು. ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾದ ಹಿನ್ನೆಲೆಯಲ್ಲಿ, ಪೊಲೀಸರು ಈತನನ್ನು 2026 ಫೆಬ್ರವರಿ 13ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ನ್ಯಾಯಾಲಯದಿಂದ ಜಾಮೀನು:

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯ ಪರವಾಗಿ ಕಜೆ ಲಾ ಚೇಂಬರ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಪುತ್ತೂರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಾದ-ವಿವಾದಗಳನ್ನು ಆಲಿಸಿದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಸರಿತಾ ಡಿ. ಅವರು ಮೇ 19ರಂದು ಮಂಗಳವಾರ ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.

You may also like

News

ದೀಪಕ್ ಜಿ. ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ – ಪತ್ರಕರ್ತರು ಸಮಾಜದ ಸ್ವಾಸ್ಥ್ಯ ರಕ್ಷಕರು ಎಂದ MLC ಐವನ್ ಡಿಸೋಜ

ಸಮಾಜದಲ್ಲಿ ಶಾಂತಿ ಮತ್ತು ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಹಿರಿದಾಗಿದೆ. ಅತ್ಯಂತ ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕೆಲಸ ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ರಕ್ಷಣೆ ನೀಡುವುದು ಸರ್ಕಾರದ
News

ಬೋಳಾ ಚರ್ಚ್‌ನಲ್ಲಿ ಹೊಸ ಕೊಂಕಣಿ ಚಿತ್ರಕ್ಕೆ ಅದ್ಧೂರಿ ಚಾಲನೆ

ಪ್ರಾರ್ಥನೆ ಹಾಗೂ ಆಶೀರ್ವಚನ ಸಲ್ಲಿಸಿದ ಚರ್ಚ್ ಪ್ರಧಾನ ಧರ್ಮಗುರು ಫಾದರ್ ರೆಜಿನಾಲ್ಡ್ ಡಿಸೋಜ ನಾಯಕ ನಟನಾಗಿ ಮಂಗಳೂರು ಧರ್ಮಕ್ಷೇತ್ರದ ICYM ಕೇಂದ್ರೀಯ ಅಧ್ಯಕ್ಷ ವಿಜಯ್ ಅಶ್ವಿನ್ ಕಾರ್ಡೋಜ

You cannot copy content of this page