August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಪ್ಪಳದಲ್ಲಿ ರಸ್ತೆ ಕಾಮಗಾರಿ ಗುಂಡಿಗೆ ಬಿದ್ದ ಐಷಾರಾಮಿ ಕಾರು – ಸಾರ್ವಜನಿಕರ ಸಹಾಯದಿಂದ ಚಾಲಕನ ರಕ್ಷಣೆ, ತನಿಖೆ ವೇಳೆ ಸಿಕ್ಕಿಬಿದ್ದ ಅಕ್ರಮ ಮದ್ಯದ ಜಾಲ!

ಮಂಜೇಶ್ವರ ಇಲ್ಲಿನ ಉಪ್ಪಳ ಗೇಟ್ ಬಳಿ ರಸ್ತೆ ಕಾಮಗಾರಿಗಾಗಿ ಮುಚ್ಚಲಾಗಿದ್ದ ರಸ್ತೆಯಲ್ಲಿ ನಿಯಮ ಉಲ್ಲಂಘಿಸಿ ನುಗ್ಗಿದ ಕಾರೊಂದು ಆಳವಾದ ಗುಂಡಿಗೆ ಬಿದ್ದ ಘಟನೆ ನಿನ್ನೆ ಜೂನ್ 1ರಂದು ಸೋಮವಾರ ರಾತ್ರಿ ಸಂಭವಿಸಿದೆ. ಅಪಘಾತದ ಬೆನ್ನಲ್ಲೇ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಕರ್ನಾಟಕ ಮದ್ಯ ಪತ್ತೆಯಾಗಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಘಟನೆಯ ವಿವರ:

ಉಪ್ಪಳ ಗೇಟ್ ಬಳಿ ಸದ್ಯ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಕಳೆದ ಒಂದು ತಿಂಗಳಿನಿಂದ ಈ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಅಲ್ಲದೆ ಸಾರ್ವಜನಿಕರ ಗಮನಕ್ಕೆ ಬರಲೆಂದು “ನೋ ಎಂಟ್ರಿ” (No Entry) ನಾಮಫಲಕವನ್ನು ಸಹ ಅಳವಡಿಸಲಾಗಿತ್ತು. ಆದರೆ, ನಿನ್ನೆ ರಾತ್ರಿ ಸುಮಾರು 9:20 ರ ವೇಳೆಗೆ ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದ ಕಾರು ಚಾಲಕ, ನಿರ್ಬಂಧಿತ ರಸ್ತೆಯಲ್ಲೇ ವೇಗವಾಗಿ ಮುನ್ನುಗ್ಗಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಮಗಾರಿ ನಡೆಯುತ್ತಿದ್ದ ಗುಂಡಿಗೆ ತಲೆಕೆಳಗಾಗಿ ಬಿದ್ದಿದೆ.

ಸ್ಥಳೀಯರಿಂದ ರಕ್ಷಣೆಪೊಲೀಸರ ಎಂಟ್ರಿ:

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ಧಾವಿಸಿ, ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಅತ್ಯಂತ ಶ್ರಮವಹಿಸಿ ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಘಟನಾ ಸ್ಥಳಕ್ಕೆ ತಕ್ಷಣವೇ ಧಾವಿಸಿದ ಮಂಜೇಶ್ವರ ಪೊಲೀಸರು ಕ್ರೇನ್ ಬಳಸಿ ಗುಂಡಿಗೆ ಬಿದ್ದಿದ್ದ ಕಾರನ್ನು ಹೊರಗೆ ತೆಗೆದಿದ್ದಾರೆ.

ಬಚ್ಚಿಟ್ಟಿದ್ದ 30 ಬಾಕ್ಸ್ ಮದ್ಯ ಪತ್ತೆ:

ಪೊಲೀಸರು ಕಾರನ್ನು ತಪಾಸಣೆ ನಡೆಸಿದಾಗ ಇಡೀ ಕಾರಿನಲ್ಲಿ ಅಕ್ರಮವಾಗಿ ಬಚ್ಚಿಡಲಾಗಿದ್ದ ಸುಮಾರು 30 ಬಾಕ್ಸ್‌ಗಳಷ್ಟು ಕರ್ನಾಟಕದ ಮದ್ಯ ಪತ್ತೆಯಾಗಿದೆ. ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಮೀಯಪದವು ಮೂಲದ ಕುಳೂರು ಚಿನಾಲ ಚಂದ್ರಹಾಸ ಎಂಬವರ ಪುತ್ರ 28 ವರ್ಷ ಪ್ರಾಯದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. ಪೊಲೀಸರು ಸದ್ಯ ಕಾರು ಮತ್ತು ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಅಕ್ರಮ ಮದ್ಯದ ಜಾಲದ ಹಿಂದೆ ಬೇರೆ ಯಾರಿದ್ದಾರೆ ಎಂಬ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.

You may also like

News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ
News

ಪೊಂಪೈ ಕಾಲೇಜು ಐಕಳದಲ್ಲಿ ಮಾದಕ ವಸ್ತು, ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ

ಯುವಜನತೆ ಜಾಗೃತರಾದರೆ ಸಮಾಜ ಸುಧಾರಣೆ ಸಾಧ್ಯ – ಗಣೇಶ್ ಕುಮಾರ್ ಪೊಂಪೈ ಕಾಲೇಜು ಐಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ, ಮಾನವ ಕಳ್ಳಸಾಗಣೆ ವಿರೋಧಿ ಸಂಘ, ಮಾದಕ

You cannot copy content of this page