July 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುಳ್ಯದಲ್ಲಿ ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

ಅನಾರೋಗ್ಯದಿಂದ ಬಳಲುತ್ತಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕರಿಂಬಿಲ ನಿವಾಸಿ ಹಾಗೂ ಎನ್ನೂರು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ 14 ವರ್ಷ ಪ್ರಾಯದ ಶಿಶಿಲ್ ಎಂದು ಗುರುತಿಸಲಾಗಿದೆ.

ಕುಟುಂಬದವರ ಮಾಹಿತಿ ಪ್ರಕಾರ, ಶಿಶಿಲ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕಾಣಿಯೂರು, ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬ ನಿರ್ಧರಿಸಿತ್ತು.

ಆದರೆ ಜುಲಾಯ್ 5ರಂದು ಭಾನುವಾರ ರಾತ್ರಿ ಶಿಶಿಲ್ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದ್ದು, ತಕ್ಷಣ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಶಿಶಿಲ್, ಯಕ್ಷಗಾನ ಹಾಗೂ ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಕುಟುಂಬ, ಶಾಲೆ ಹಾಗೂ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ಸೃಷ್ಟಿಸಿದೆ. ಶಿಶಿಲ್ ತಂದೆ-ತಾಯಿ ಹಾಗೂ ಒಬ್ಬ ಸಹೋದರನನ್ನು ಅಗಲಿದ್ದಾರೆ.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page