July 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಿರಿಯ ಕಲಾವಿದ ಎಲ್.ಕೆ. ಧರಣ್ ಮಾಣಿ ಅವರಿಗೆ ಪಿತೃ ವಿಯೋಗ

ಭಜನಾ ಗಾಯಕ ರುಕ್ಮಯ್ಯ ಲಾಡ್ರುಕೋಡಿ ನಿಧನ

ಖ್ಯಾತ ಹಿನ್ನೆಲೆ ಗಾಯಕ, ಕಲಾವಿದ ಹಾಗೂ ಸಂಕೀರ್ತನಕಾರ ಎಲ್.ಕೆ. ಧರಣ್ ಮಾಣಿ ಅವರ ತಂದೆ, ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಲಾಡ್ರುಕೋಡಿ ನಿವಾಸಿ 90 ವರ್ಷ ಪ್ರಾಯದ ರುಕ್ಮಯ್ಯ ಅವರು ವಯೋಸಹಜ ಕಾಯಿಲೆಯಿಂದ ಜುಲಾಯ್ 8ರಂದು ಬುಧವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಸಾಧು ಸ್ವಭಾವದ ಭಜನಾ ಗಾಯಕ:

ತಮ್ಮ ಸರಳ ಮತ್ತು ಸಾಧು ಸ್ವಭಾವದಿಂದ ಗುರುತಿಸಿಕೊಂಡಿದ್ದ ರುಕ್ಮಯ್ಯ ಅವರು, ಒಂದು ಕಾಲದಲ್ಲಿ ‘ಭಜನೆಯ ರುಕ್ಮಯ್ಯ’ ಎಂದೇ ಭಕ್ತಾದಿಗಳಲ್ಲಿ ಪ್ರಸಿದ್ಧಿ ಪಡೆದಿದ್ದರು. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಅವರು, ಸ್ಥಳೀಯವಾಗಿ ಭಜನಾ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕುಟುಂಬ ಮತ್ತು ಶ್ರದ್ಧಾಂಜಲಿ:

ಮೃತರು ಖ್ಯಾತ ಹಿನ್ನೆಲೆ ಗಾಯಕ ಎಲ್.ಕೆ. ಧರಣ್ ಮಾಣಿ ಸೇರಿದಂತೆ ಐವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಲಾಡ್ರುಕೋಡಿ ತರವಾಡು ಹಾಗೂ ಧರ್ಮದೈವಗಳ ಆರಾಧನಾ ಕೇಂದ್ರವಾದ ಧರ್ಮಚಾವಡಿಯ ಹಿರಿಯ ಕೊಂಡಿಯಾಗಿದ್ದ ರುಕ್ಮಯ್ಯ ಅವರ ನಿಧನದಿಂದ ಕುಟುಂಬಸ್ಥರು ಹಾಗೂ ಅಭಿಮಾನಿ ಬಳಗದಲ್ಲಿ ಶೋಕ ಮಡುಗಟ್ಟಿದೆ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ ಮತ್ತು ಕುಟುಂಬಸ್ಥರಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಹಿತೈಷಿಗಳು ಪ್ರಾರ್ಥಿಸಿದ್ದಾರೆ.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page