August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಮೂಲದ ಹಿರಿಯ ವಕೀಲ ಚಿದಾನಂದ ಡಿ. ಹೈಕೋರ್ಟ್ ಸರ್ಕಾರಿ ವಕೀಲರಾಗಿ ಆಯ್ಕೆ

ಪ್ರಸಿದ್ಧ ಜವುಳಿ ವ್ಯಾಪಾರಿಯಾಗಿದ್ದ ದಿವಂಗತ ಕೆ.ಎಂ. ಗಿರಿಯಪ್ಪ ಪೂಜಾರಿ ಹಾಗೂ ಸೀತಮ್ಮ ದಂಪತಿಯ ಪುತ್ರ

ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ರಾಜ್ಯ ಸರ್ಕಾರಿ ವಕೀಲರಾಗಿ (A.G.A.) ಮಾಣಿ ಮೂಲದ ಚಿದಾನಂದ ಡಿ. ಬಂಟ್ವಾಳ ಅವರು ನೇಮಕಗೊಂಡಿದ್ದಾರೆ. ಇವರು ಮಾಣಿಯ ಪ್ರಸಿದ್ಧ ಜವುಳಿ ವ್ಯಾಪಾರಿಯಾಗಿದ್ದ ದಿವಂಗತ ಕೆ.ಎಂ. ಗಿರಿಯಪ್ಪ ಪೂಜಾರಿ ಮತ್ತು ಸೀತಮ್ಮ ದಂಪತಿಯ ಪುತ್ರರಾಗಿದ್ದಾರೆ.

ಪ್ರತಿಭಾವಂತ ಹಳೆ ವಿದ್ಯಾರ್ಥಿ:

ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬರಿಮಾರಿನಲ್ಲಿ ಪೂರೈಸಿದ ಇವರು, ಪ್ರೌಢ ಶಿಕ್ಷಣವನ್ನು ಕರ್ನಾಟಕ ಹೈಸ್ಕೂಲ್ ಮಾಣಿಯಲ್ಲಿ ಮುಗಿಸಿದರು. ಬಳಿಕ ಮಂಗಳೂರಿನ ಪ್ರತಿಷ್ಠಿತ SDM ಕಾನೂನು ಕಾಲೇಜಿನಲ್ಲಿ ನ್ಯಾಯಶಾಸ್ತ್ರ ಪದವಿ ಪಡೆದು, ಸಂಸ್ಥೆಯ ಪ್ರತಿಭಾವಂತ ಹಳೆ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.

ಪ್ರಸ್ತುತ ಹೈಕೋರ್ಟ್‌ನ ಹೆಚ್ಚುವರಿ ರಾಜ್ಯ ಸರ್ಕಾರಿ ವಕೀಲರಾಗಿ ನೇಮಕಗೊಳ್ಳುವ ಮೂಲಕ ಇವರು ಬಂಟ್ವಾಳ ಮತ್ತು ಮಾಣಿ ವಲಯಕ್ಕೆ ಕೀರ್ತಿ ತಂದಿದ್ದಾರೆ. ಇವರ ಈ ಸಾಧನೆಗೆ ಸ್ಥಳೀಯ ಗಣ್ಯರು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

You may also like

News

ನೀರುಮಾರ್ಗದ ಚರ್ಚ್ ನ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ಸಾಂಪ್ರದಾಯಿಕ ಆಹಾರ ಹಬ್ಬದ ಸಂಭ್ರಮ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸಂತ ಜೋಸೆಫ್ ಕಾರ್ಮಿಕರ ದೇವಾಲಯದ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ‘ಸಾಂಪ್ರದಾಯಿಕ ಆಹಾರ ಹಬ್ಬ’
News

Father Muller College of Nursing Strengthens Academic Collaborations Through Two more Strategic MoUs on Palliative Care and Counselling

Reinforcing its commitment to holistic nursing education, interdisciplinary learning, and community-oriented healthcare, Father Muller School & College of Nursing (FMCON)

You cannot copy content of this page