July 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಮೂಲದ ಹಿರಿಯ ವಕೀಲ ಚಿದಾನಂದ ಡಿ. ಹೈಕೋರ್ಟ್ ಸರ್ಕಾರಿ ವಕೀಲರಾಗಿ ಆಯ್ಕೆ

ಪ್ರಸಿದ್ಧ ಜವುಳಿ ವ್ಯಾಪಾರಿಯಾಗಿದ್ದ ದಿವಂಗತ ಕೆ.ಎಂ. ಗಿರಿಯಪ್ಪ ಪೂಜಾರಿ ಹಾಗೂ ಸೀತಮ್ಮ ದಂಪತಿಯ ಪುತ್ರ

ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ರಾಜ್ಯ ಸರ್ಕಾರಿ ವಕೀಲರಾಗಿ (A.G.A.) ಮಾಣಿ ಮೂಲದ ಚಿದಾನಂದ ಡಿ. ಬಂಟ್ವಾಳ ಅವರು ನೇಮಕಗೊಂಡಿದ್ದಾರೆ. ಇವರು ಮಾಣಿಯ ಪ್ರಸಿದ್ಧ ಜವುಳಿ ವ್ಯಾಪಾರಿಯಾಗಿದ್ದ ದಿವಂಗತ ಕೆ.ಎಂ. ಗಿರಿಯಪ್ಪ ಪೂಜಾರಿ ಮತ್ತು ಸೀತಮ್ಮ ದಂಪತಿಯ ಪುತ್ರರಾಗಿದ್ದಾರೆ.

ಪ್ರತಿಭಾವಂತ ಹಳೆ ವಿದ್ಯಾರ್ಥಿ:

ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬರಿಮಾರಿನಲ್ಲಿ ಪೂರೈಸಿದ ಇವರು, ಪ್ರೌಢ ಶಿಕ್ಷಣವನ್ನು ಕರ್ನಾಟಕ ಹೈಸ್ಕೂಲ್ ಮಾಣಿಯಲ್ಲಿ ಮುಗಿಸಿದರು. ಬಳಿಕ ಮಂಗಳೂರಿನ ಪ್ರತಿಷ್ಠಿತ SDM ಕಾನೂನು ಕಾಲೇಜಿನಲ್ಲಿ ನ್ಯಾಯಶಾಸ್ತ್ರ ಪದವಿ ಪಡೆದು, ಸಂಸ್ಥೆಯ ಪ್ರತಿಭಾವಂತ ಹಳೆ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.

ಪ್ರಸ್ತುತ ಹೈಕೋರ್ಟ್‌ನ ಹೆಚ್ಚುವರಿ ರಾಜ್ಯ ಸರ್ಕಾರಿ ವಕೀಲರಾಗಿ ನೇಮಕಗೊಳ್ಳುವ ಮೂಲಕ ಇವರು ಬಂಟ್ವಾಳ ಮತ್ತು ಮಾಣಿ ವಲಯಕ್ಕೆ ಕೀರ್ತಿ ತಂದಿದ್ದಾರೆ. ಇವರ ಈ ಸಾಧನೆಗೆ ಸ್ಥಳೀಯ ಗಣ್ಯರು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

You may also like

News

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌ಗಳಿಗೆ ಪೊಲೀಸ್ ಕಠಿಣ ಕ್ರಮ – 3 ಪ್ರತ್ಯೇಕ ಪ್ರಕರಣ ದಾಖಲು

3 ಪ್ರತ್ಯೇಕ ಪ್ರಕರಣ ದಾಖಲು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ತಿರುಚಿದ ಹಾಗೂ ಸಮಾಜದ ಶಾಂತಿ ಕದಡುವ
News

ಬಂಟ್ವಾಳದಲ್ಲಿ ಯುವತಿಯ ಕೊಲೆ – ಆರೋಪಿಯ ಬಂಧನ ಬೆನ್ನಲ್ಲೇ ಹೈಡ್ರಾಮಾ; ಇಲಿ ಪಾಷಾಣ ಸೇವಿಸಿ ಆಸ್ಪತ್ರೆಗೆ ದಾಖಲು!

ನಿನ್ನೆ ಜುಲಾಯ್ 16ರಂದು ಗುರುವಾರ ನಡೆದಿದ್ದ ಪ್ರಮುಖ ಘಟನೆಗೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಆರೋಪಿಯನ್ನು ವಶಕ್ಕೆ ಪಡೆಯುವಷ್ಟರಲ್ಲಿ ಆತ ಇಲಿ

You cannot copy content of this page