July 22, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೊಬೈಲ್ ಮಾತಿನ ಜಗಳಕ್ಕೆ ರಕ್ತದ ಅಂತ್ಯ – ಕೊಡಲಿಯಿಂದ ತಮ್ಮನ ಹತ್ಯೆ ಮಾಡಿದ ಅಣ್ಣ

ಮೊಬೈಲ್‌ನಲ್ಲಿ ಯುವತಿಯೊಬ್ಬಳೊಂದಿಗೆ ಮಾತನಾಡಿದ್ದ ವಿಚಾರವಾಗಿ ಆರಂಭವಾದ ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಂಗಳೂರು ತಾಲೂಕಿನ ಕಾಟಿಪಳ್ಳ ಗ್ರಾಮದ ಚೊಕ್ಕಬೆಟ್ಟು, ಕೃಷ್ಣಮಠ ರಸ್ತೆ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.  ಚೊಕ್ಕಬೆಟ್ಟಿನ ರೇಖಾ ಅವರ ಬಾಡಿಗೆ ಮನೆಯಲ್ಲಿ ಕಳೆದ ಐದು ವರ್ಷಗಳಿಂದ ಶಿವಲೀಲಾ ಹಾಗೂ ಆಕೆಯ ಇಬ್ಬರು ಪುತ್ರರಾದ ಸೋಮನಾಥ ಮತ್ತು ಮಲ್ಲಿಕಾರ್ಜುನ ವಾಸವಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು.

ಜುಲೈ 19ರಂದು ಭಾನುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಮಲ್ಲಿಕಾರ್ಜುನ ಮೊಬೈಲ್‌ನಲ್ಲಿ ಯುವತಿಯೊಬ್ಬಳೊಂದಿಗೆ ಮಾತನಾಡುತ್ತಿದ್ದುದನ್ನು ಅಣ್ಣ ಸೋಮನಾಥ ವಿರೋಧಿಸಿದ್ದ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಲ್ಲಿಕಾರ್ಜುನ ಅಣ್ಣನಿಗೆ ಬೈದಿದ್ದಾನೆ ಎನ್ನಲಾಗಿದೆ.

ಇದರಿಂದ ತೀವ್ರ ಆಕ್ರೋಶಗೊಂಡ ಸೋಮನಾಥ, ತಮ್ಮ ಮಲಗಿದ ಬಳಿಕ ಮನೆಯಲ್ಲಿದ್ದ ಕೊಡಲಿಯಿಂದ ತಲೆ ಮತ್ತು ಮುಖಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾನೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ BNS ಕಲಂ 103(1)ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಕೃಷ್ಣಾಪುರ ಮಠ ರಸ್ತೆ ಸಮೀಪದ ಪೊದೆಯಲ್ಲಿ ಅವಿತುಕೊಂಡಿದ್ದ ಆರೋಪಿಯನ್ನು ಬಂಧಿಸಿದರು. ವಿಚಾರಣೆ ವೇಳೆ ಆರೋಪಿಯು ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

 ಕಲ್ಲಡ್ಕ ಶ್ರೀ ರಾಮ ಶಾಲಾ ಬಸ್ ಮೇಲೆ ಮರ ಬಿದ್ದು ದುರಂತ – ಓರ್ವ ವಿದ್ಯಾರ್ಥಿ ಮೃತ್ಯು, ಇಬ್ಬರು ಆಸ್ಪತ್ರೆಗೆ ದಾಖಲು

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರಬಿದ್ದು, ಮಗುವೊಂದು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಬಂಟ್ವಾಳ
News

ರಾಜು ಸ್ಟೀಫನ್ ಡಿಸೋಜ ಅವರಿಗೆ ಗೆಲುವು – ಕಾಸರಗೋಡಿನಲ್ಲಿ ಬ್ಯಾಂಕ್‌ಗೆ ದಂಡ ವಿಧಿಸಿದ ಗ್ರಾಹಕ ಆಯೋಗ!

ಕಾಸರಗೋಡು ಸೌತ್ ಇಂಡಿಯನ್ ಬ್ಯಾಂಕ್‌ನ ಸೀತಾಂಗೋಳಿ ಶಾಖೆಯ ವಿರುದ್ಧ ದೂರು ನೀಡಿದ್ದ ಗ್ರಾಹಕರಾದ ರಾಜು ಸ್ಟೀಫನ್ ಡಿಸೋಜ ಅವರಿಗೆ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗವು ಮಹತ್ವದ

You cannot copy content of this page