August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೀಟ್ ಹೋರಾಟಕ್ಕೆ ಧಾರ್ಮಿಕ ಬಣ್ಣ, ಶಾಂತಿ ಭಂಗಕ್ಕೆ ಯತ್ನ – ವಿಟ್ಲದಲ್ಲಿ ವ್ಯಕ್ತಿಯ ಬಂಧನ

ನೀಟ್ (NEET) ಹೋರಾಟಕ್ಕೆ ಧಾರ್ಮಿಕ ಬಣ್ಣ ಬಳಿದು, ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಹಾಗೂ ಸಾರ್ವಜನಿಕ ಶಾಂತಿ-ನೆಮ್ಮದಿಗೆ ಭಂಗ ತರುವಂತಹ ಅವಹೇಳನಕಾರಿ ಸಂದೇಶ ಪ್ರಸಾರ ಮಾಡಿದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳದ ಕೇಪು ನಿವಾಸಿ 36 ವರ್ಷ ಪ್ರಾಯದ ಭರತ್ ಎಂದು ಗುರುತಿಸಲಾಗಿದೆ.

ಘಟನೆಯ ಹಿನ್ನೆಲೆ:

ದೂರುದಾರರು ‘KFC KHANDIGA’ ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ಸದಸ್ಯರಾಗಿದ್ದು, ಜುಲಾಯಿ 23ರಂದು ಗ್ರೂಪ್‌ಗೆ ಬಂದ ಸ್ಕ್ರೀನ್‌ಶಾಟ್‌ ಒಂದನ್ನು ಗಮನಿಸಿದ್ದರು. ಅದರಲ್ಲಿ ಸಮಾಜದಲ್ಲಿ ವೈಮನಸ್ಸು ಬೆಳೆಸುವಂತಹ ಬರಹಗಳಿದ್ದು, ಈ ಕುರಿತು ಪರಿಶೀಲಿಸಿದಾಗ ಆರೋಪಿ ಭರತ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಈ ಅವಹೇಳನಕಾರಿ ಬರಹವನ್ನು ಹಂಚಿಕೊಂಡಿರುವುದು ಕಂಡುಬಂದಿತ್ತು. ಈ ಸಂಬಂಧ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

* ಪ್ರಕರಣ ಕ್ರಮಾಂಕ: ಅ.ಕ್ರ: 160/2026

* ದಾಖಲಾದ ಕಾಯ್ದೆ: ಭಾರತೀಯ ನ್ಯಾಯ ಸಂಹಿತೆ (BNS 2023) ಕಲಂ 197(1)(a), 197(1)(c) ಹಾಗೂ 353(2)

ಪ್ರಕರಣ ದಾಖಲಿಸಿಕೊಂಡ ವಿಟ್ಲ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಭರತ್‌ನನ್ನು ದಸ್ತಗಿರಿ ಮಾಡಿದ್ದು, ಸದ್ಯ ಬಂಧಿತನನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ.

You may also like

News

ನೀರುಮಾರ್ಗದ ಚರ್ಚ್ ನ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ಸಾಂಪ್ರದಾಯಿಕ ಆಹಾರ ಹಬ್ಬದ ಸಂಭ್ರಮ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸಂತ ಜೋಸೆಫ್ ಕಾರ್ಮಿಕರ ದೇವಾಲಯದ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ‘ಸಾಂಪ್ರದಾಯಿಕ ಆಹಾರ ಹಬ್ಬ’
News

Father Muller College of Nursing Strengthens Academic Collaborations Through Two more Strategic MoUs on Palliative Care and Counselling

Reinforcing its commitment to holistic nursing education, interdisciplinary learning, and community-oriented healthcare, Father Muller School & College of Nursing (FMCON)

You cannot copy content of this page