August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ICYM ಮಿಯಪದವು ಘಟಕದಿಂದ ‘ಮಳೆಯಲ್ಲಿ ಮಸ್ತಿ’ ಕ್ರೀಡೋತ್ಸವ ಸಂಭ್ರಮ

ICYM ಮಿಯಪದವು ಘಟಕದ ಆಶ್ರಯದಲ್ಲಿ ‘ಮಳೆಯಲ್ಲಿ ಮಸ್ತಿ’ ವಿನೂತನ ಮಳೆಯ ಆಟಗಳ ಕಾರ್ಯಕ್ರಮವು ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡಿತು.

ಐಸಿವೈಎಂ ಕಾರ್ಯದರ್ಶಿ ರೀಶನ್ ಮೊಂತೇರೊ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಂದನೀಯ ಡೇನಿಯಲ್ ಡಿಸೋಜ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಸಿಸ್ಟರ್ ಅಲ್ವಿನಾ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಲುವಿಸ್ ಮೊಂತೆರೊ, ಕಾರ್ಯದರ್ಶಿ ಸಿಲ್ವಿಯಾ ಸಂತಾನಾಜ್, ಆಯೋಗಗಳ ಸಂಚಾಲಕ ಪ್ರದೀಪ್ ಡಿಸೋಜ, ಐಸಿವೈಎಂ ಸಂಯೋಜಕ ವಿನೋದ್ ಡಿಸೋಜ, ಅಧ್ಯಕ್ಷ ಮೆಲ್ವಿನ್ ಡಿಸೋಜ ಹಾಗೂ ಕ್ರೀಡಾ ಪ್ರತಿನಿಧಿ ರಿಕ್ಸನ್ ಮೊಂತೇರೊ ಉಪಸ್ಥಿತರಿದ್ದರು.

ಕ್ರೀಡಾ ಪ್ರತಿನಿಧಿ ರಿಕ್ಸನ್ ಮೊಂತೆರೊ ಸ್ವಾಗತಿಸಿದರು. ಬಳಿಕ ಸಂಜೆ 5 ಗಂಟೆಯವರೆಗೆ ವಿವಿಧ ವಿನೋದಭರಿತ ಮಳೆಯ ಆಟಗಳು ನಡೆದವು. ಐಸಿವೈಎಂ ಸದಸ್ಯರು ಆಟಗಳ ಆಯೋಜನೆ ಮತ್ತು ನಿರ್ವಹಣೆಯ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿಭಾಯಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ಸಂಜೆ ಚಹಾದ ವ್ಯವಸ್ಥೆ ಮಾಡಲಾಗಿತ್ತು. ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸುವುದರ ಜೊತೆಗೆ ಭಾಗವಹಿಸಿದ ಎಲ್ಲಾ ತಂಡಗಳಿಗೂ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಐಸಿವೈಎಂ ಸದಸ್ಯೆ ಪ್ರಜ್ವಿತಾ ಡಿಸೋಜ ವಂದಿಸಿದರು. ಮಳೆಯ ನಡುವೆಯೂ ಸ್ಪರ್ಧಾಳುಗಳು ಅತ್ಯಂತ ಉತ್ಸಾಹದಿಂದ ವಿವಿಧ ಆಟಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

You may also like

News

ಮಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕಿ, ಹಿರಿಯ ಮಾಧ್ಯಮ ತಜ್ಞೆ ಡಾ. ವಹೀದಾ ಸುಲ್ತಾನ ನಿಧನ

ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (MCJ) ವಿಭಾಗದ ನಿವೃತ್ತ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ 70 ವರ್ಷ ಪ್ರಾಯದ ಡಾ. ವಹೀದಾ ಸುಲ್ತಾನಾ ಅವರು
News

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಗ್ರೇಶಿಯನ್ ರೊಡ್ರಿಗಸ್ ನೇಮಕ

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿ (Associate Public Relations Officer – APRO)ಯಾಗಿ ಗ್ರೇಶಿಯನ್ ರೊಡ್ರಿಗಸ್ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ

You cannot copy content of this page