August 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನಲ್ಲಿ ಪರ್ಯಾಯ ದಿನ ನೀರು ಪೂರೈಕೆ – ಆಗಸ್ಟ್‌ 31ರವರೆಗೆ ತಾತ್ಕಾಲಿಕ ವ್ಯವಸ್ಥೆ

ತುಂಬೆ ಜಾಕ್‌ವೆಲ್‌ನ ಇನ್‌ಟೇಕ್‌ ಭಾಗದಲ್ಲಿ ಮಳೆನೀರಿನೊಂದಿಗೆ ಮರದ ದಿಮ್ಮಿಗಳು, ಕೊಂಬೆಗಳು, ಪ್ಲಾಸ್ಟಿಕ್‌ ತ್ಯಾಜ್ಯ, ಬಟ್ಟೆ, ಚೀಲಗಳು, ಹೂಳು ಸೇರಿದಂತೆ ವಿವಿಧ ತ್ಯಾಜ್ಯಗಳು ಸಂಗ್ರಹಗೊಂಡ ಪರಿಣಾಮ ನೀರು ಪಂಪಿಂಗ್‌ ವ್ಯವಸ್ಥೆಗೆ ಅಡಚಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ನೀರು ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ.

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನದಿಯ ನೀರಿನ ಹರಿವು ಹೆಚ್ಚಾಗಿದ್ದು, ತುಂಬೆ ಜಾಕ್‌ವೆಲ್‌ನ ಇನ್‌ಟೇಕ್‌ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹಗೊಂಡಿದೆ. ಇದರಿಂದ ಪಂಪ್‌ನ ಸ್ಕ್ರೀನ್‌ ಹಾನಿಗೊಂಡು ಮುಚ್ಚಿಹೋಗಿರುವ ಪರಿಣಾಮ ಪಂಪಿಂಗ್‌ ಸಾಮರ್ಥ್ಯ ಕಡಿಮೆಯಾಗಿದೆ.

ಹಾನಿಗೊಂಡಿರುವ ಸ್ಕ್ರೀನ್‌ ದುರಸ್ತಿ ಹಾಗೂ ಇನ್‌ಟೇಕ್‌ ಭಾಗದಲ್ಲಿ ಸಂಗ್ರಹಗೊಂಡಿರುವ ತ್ಯಾಜ್ಯ ತೆರವುಗೊಳಿಸುವ ಕಾಮಗಾರಿ ನಡೆಯುತ್ತಿದ್ದು, ಪಂಪಿಂಗ್‌ ವ್ಯವಸ್ಥೆಯನ್ನು ಪೂರ್ಣ ಸಾಮರ್ಥ್ಯಕ್ಕೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೆ ನಿರಂತರವಾಗಿ ಪೂರ್ಣ ಸಾಮರ್ಥ್ಯದಲ್ಲಿ ನೀರು ಪಂಪ್‌ ಮಾಡುವುದು ಕಷ್ಟವಾಗಲಿದೆ ಎಂದು ಪಾಲಿಕೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸುರತ್ಕಲ್‌ ಪ್ರದೇಶದ ವಾರ್ಡ್‌ಗಳು ಹಾಗೂ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಲೋ-ಲೆವೆಲ್‌ ವಾರ್ಡ್‌ಗಳಿಗೆ ಪರ್ಯಾಯ ದಿನಗಳಲ್ಲಿ ನೀರು ಪೂರೈಕೆ ಮಾಡುವ ತಾತ್ಕಾಲಿಕ ವ್ಯವಸ್ಥೆಯನ್ನು 2026 ಆಗಸ್ಟ್‌ 31 ರವರೆಗೆ ಮುಂದುವರಿಸಲಾಗುವುದು.

ನೀರಿನ ಪೂರೈಕೆಯಲ್ಲಿ ಉಂಟಾಗುವ ಬದಲಾವಣೆಯನ್ನು ಸಾರ್ವಜನಿಕರು ಅರ್ಥಮಾಡಿಕೊಂಡು ಸಹಕರಿಸುವಂತೆ ಮನವಿ ಮಾಡಿರುವ ಪಾಲಿಕೆ, ನೀರನ್ನು ಮಿತವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

You may also like

News

ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ ವಿಷನ್ ಸಮಿತಿ ಅಧ್ಯಕ್ಷರಾಗಿ ಡಾ. ಅಖ್ತರ್ ಹುಸೇನ್ ನೇಮಕ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ (State Oral Health Programme) ವಿಷನ್ ಸಮಿತಿ ಅಧ್ಯಕ್ಷರಾಗಿ
News

ಸಮಾಜಮುಖಿ ಸೇವೆ – ದಿವಂಗತ ಸಹೋದರನ ಸ್ಮರಣಾರ್ಥ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಕೊಡುಗೆ ನೀಡಿದ ಬಶೀರ್ ಬಂಟ್ವಾಳ

ಮಾನವೀಯ ಸೇವೆಗೆ ಯಾವುದೇ ಜಾತಿ, ಮತ ಅಥವಾ ಧರ್ಮದ ಭೇದವಿಲ್ಲ ಎಂಬುದನ್ನು ಸಾರುವಂತೆ, ದುಬೈ ಅಸ್ತರ್ ಆಸ್ಪತ್ರೆಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಬಶೀರ್ ಬಂಟ್ವಾಳ ಅವರು ತಮ್ಮ

You cannot copy content of this page