August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿಜಾರಿನಲ್ಲಿ ಸಿಲಿಂಡರ್ ಸ್ಫೋಟ – ಒಂದೇ ಕುಟುಂಬದ ಮೂವರಿಗೆ ಸುಟ್ಟ ಗಾಯ

ಮೂಡುಬಿದಿರೆಯ ಮಿಜಾರ್ ಸಮೀಪ ಬಾಡಿಗೆ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸುಟ್ಟ ಗಾಯಗೊಂಡ ಘಟನೆ ಇಂದು ಆಗಸ್ಟ್ 11ರಂದು ಮಂಗಳವಾರ ಬೆಳಗ್ಗೆ ನಡೆದಿದೆ. ಮಿಜಾರ್ ಸಮೀಪ ಬೆಳಗ್ಗೆ ಸುಮಾರು 6.30ರ ವೇಳೆಗೆ ಈ ಘಟನೆ ಸಂಭವಿಸಿದೆ.

ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 31 ವರ್ಷ ಪ್ರಾಯದ ಶಿವರಾಮ, ಅವರ ಪತ್ನಿ 25 ವರ್ಷ ಪ್ರಾಯದ ಗಂಗಾ ಹಾಗೂ ಅವರ ಪುತ್ರ 6 ವರ್ಷ ಪ್ರಾಯದ ಆದರ್ಶ್ ಸಿಲಿಂಡರ್ ಸ್ಫೋಟದಿಂದ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.

ಶಿವರಾಮ ಅವರು ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮನ್‌ ಆಗಿ ಕೆಲಸ ಮಾಡುತ್ತಿದ್ದು, ಸ್ಫೋಟದಲ್ಲಿ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರ ಪತ್ನಿ ಹಾಗೂ ಪುತ್ರನಿಗೂ ಸುಟ್ಟ ಗಾಯಗಳಾಗಿವೆ. ಸಿಲಿಂಡರ್ ಸ್ಫೋಟದ ಪರಿಣಾಮ ಮನೆಯೊಳಗೆ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸಂಬಂಧಪಟ್ಟವರು ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸುವ ಕ್ರಮ ಕೈಗೊಳ್ಳಲಾಗಿದೆ.

ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

You may also like

News

ಸುರತ್ಕಲ್‌ನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗುತ್ತಿಗೆದಾರ ಸಾವು

ಅಪಾರ್ಟ್‌ಮೆಂಟ್ ಮೇಲ್ಭಾಗದಲ್ಲಿ ಶೀಟ್ ಅಳವಡಿಸುವ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಗುತ್ತಿಗೆದಾರರೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ನ ಕೃಷ್ಣಾಪುರ 6ನೇ ಬ್ಲಾಕ್‌ನ ಪ್ಲಾಝಾ
News

ತ್ರಿಷಾ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನ 28ನೇ ಸಂಸ್ಥಾಪನಾ ದಿನಾಚರಣೆ ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸ್ವಾಗತ

You cannot copy content of this page