August 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿ ಉಮೇಶ್ ಬಂಧನ

ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಮನೆಗೆ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

 

ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕುಳಿತು ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಬಳಿಕ ಬಾಲಕ ಮನೆಗೆ ತೆರಳಿದಾಗ ಅಲ್ಲಿಗೂ ಬಂದ ಆರೋಪಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಿಎನ್‌ಎಸ್‌ನ ಸಂಬಂಧಿತ ಕಲಂಗಳ ಅಡಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ವಿಟ್ಲ ಕೊಂಡಗಾಯಿ ನಿವಾಸಿ 53 ವರ್ಷ ಪ್ರಾಯದ ಉಮೇಶ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಚಾಮರಾಜನಗರ ಶೂಟೌಟ್‌: ‘ಹೊಸ ಚಪ್ಪಲಿ, ಚರ್ಮವಿಲ್ಲದ ಮಾಂಸ’ದ ನಿಗೂಢತೆ – SIT ತನಿಖೆಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಆಗ್ರಹ

ಮೂವರ ಸಾವಿನ ಪ್ರಕರಣದಲ್ಲಿ ಜಪ್ತಿ ವಸ್ತುಗಳೇ ಹುಟ್ಟುಹಾಕಿದ ಹಲವು ಪ್ರಶ್ನೆಗಳು – ನಿಷ್ಪಕ್ಷಪಾತ ತನಿಖೆಗೆ ಕ್ರೈಸ್ತ ಸಂಘಟನೆ ಆಗ್ರಹ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ನಡೆದ ಗುಂಡಿನ
News

ಅಜ್ಜಿಯ ಚಿನ್ನದ ಬಳೆ ಕಸಿದುಕೊಂಡ ಮೊಮ್ಮಗನ ಬಂಧನ

ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು,

You cannot copy content of this page