August 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹನೂರು ಶೂಟೌಟ್ ಪ್ರಕರಣ – ಆರ್ಚ್‌ಬಿಷಪ್ ಪೀಟರ್ ಮಚಾದೊ ಬೆಂಬಲಕ್ಕೆ ನಿಂತ DAPC; ನ್ಯಾಯಾಂಗ ತನಿಖೆಗೆ ಆಗ್ರಹ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಗುಂಡಿನ ಚಕಮಕಿ ಮತ್ತು ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಮಹಾ ಧರ್ಮಕ್ಷೇತ್ರದ ಆರ್ಚ್‌ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಮಚಾದೊ ಅವರ ಆಗ್ರಹಕ್ಕೆ ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಪ್ರಕರಣದ ಕುರಿತು ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ಪಾರದರ್ಶಕ ನ್ಯಾಯಾಂಗ ತನಿಖೆ ನಡೆಸಬೇಕೆಂದು DAPC ಒಗ್ಗಟ್ಟಿನಿಂದ ಒತ್ತಾಯಿಸಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ DAPC ಯ ಆರ್ಚ್‌ಬಿಷಪ್ ರೆವರೆಂಡ್ ಡಾ. ವಿನೋದ್ ಎಂ. ಚಾಕೋ ಅವರು ಕ್ರೈಸ್ತರೆಲ್ಲರೂ ಕ್ರಿಸ್ತನಲ್ಲಿ ಒಂದೇ ದೇಹದ ಸದಸ್ಯರು. ನಮ್ಮ ಸಹೋದರಸಹೋದರಿಯರು ನೋವು ಅಥವಾ ಅನ್ಯಾಯ ಅನುಭವಿಸುತ್ತಿರುವಾಗ ನಾವು ಮೌನವಾಗಿರಲು ಸಾಧ್ಯವಿಲ್ಲ. ಹೀಗಾಗಿ ಸತ್ಯ ಮತ್ತು ನ್ಯಾಯಕ್ಕಾಗಿ ಆರ್ಚ್ಬಿಷಪ್ ಪೀಟರ್ ಮಚಾದೊ ಅವರು ಮಾಡುತ್ತಿರುವ ಹೋರಾಟದೊಂದಿಗೆ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಪ್ರಮುಖ ಆಗ್ರಹಗಳು ಹಾಗೂ ಸಾರಾಂಶ:

* ನ್ಯಾಯಾಂಗ ತನಿಖೆಗೆ ಒತ್ತಾಯ: ಘಟನೆಯ ಹಿಂದಿನ ನೈಜ ಸತ್ಯಾಂಶ ಹೊರಬರಲು ಸ್ವತಂತ್ರ ನ್ಯಾಯಾಂಗ ತನಿಖೆ ತಕ್ಷಣವೇ ನಡೆಯಬೇಕು.

* ಕಾನೂನು ಕ್ರಮ: ತನಿಖೆಯಲ್ಲಿ ಯಾರೇ ತಪ್ಪಿತಸ್ಥರೆಂದು ಸಾಬೀತಾದರೂ, ಅವರ ಅಧಿಕಾರ ಅಥವಾ ಪ್ರಭಾವವನ್ನು ಲೆಕ್ಕಿಸದೆ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು.

* ಸಂತ್ರಸ್ತ ಕುಟುಂಬಗಳಿಗೆ ನ್ಯಾಯ: ಮೃತರ ಕುಟುಂಬಗಳ ಹಕ್ಕು ಹಾಗೂ ಗೌರವವನ್ನು ರಕ್ಷಿಸಿ, ಅವರಿಗೆ ಸೂಕ್ತ ನ್ಯಾಯ ಒದಗಿಸಬೇಕು.

* ಬಲಿಷ್ಠ ಕ್ರೈಸ್ತ ನಾಯಕತ್ವ: ಸಮಾಜ ಹಾಗೂ ರಾಜಕೀಯ ರಂಗದಲ್ಲಿ ಕ್ರೈಸ್ತ ಸಮುದಾಯದ ನೈಜ ಹಕ್ಕುಗಳನ್ನು ಪ್ರಜಾಸತ್ತಾತ್ಮಕವಾಗಿ ಪ್ರತಿನಿಧಿಸುವ, ತತ್ವನಿಷ್ಠ ಮತ್ತು ಧೈರ್ಯವಂತ ನಾಯಕರ ಅಗತ್ಯವಿದೆ ಎಂದು DAPC ಅಸಿಸ್ಟೆಂಟ್ ಆರ್ಚ್ಬಿಷಪ್ ರೆವರೆಂಡ್ ಸುನಿಲ್ ವಿ. ಜೇಕಬ್ ಅಭಿಪ್ರಾಯಪಟ್ಟಿದ್ದಾರೆ.

ಕ್ರಿಸ್ತನ ವಾಕ್ಯವಾದ “ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ.” (1 ಕೊರಿಂಥದವರಿಗೆ 12:26) ಎಂಬುದನ್ನು ಉಲ್ಲೇಖಿಸಿರುವ DAPC, ಸಂಕಷ್ಟದಲ್ಲಿರುವ ಕುಟುಂಬಗಳಿಗಾಗಿ ಪ್ರಾರ್ಥಿಸುವುದರ ಜೊತೆಗೆ, ಸಮುದಾಯವು ಶಾಂತಿ, ಒಗ್ಗಟ್ಟು ಮತ್ತು ಸತ್ಯದ ಹಾದಿಯಲ್ಲಿ ಸಾಗುವಂತೆ ಪತ್ರಿಕಾ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

You may also like

News

ಸ್ನೇಹ ಸದನದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಅಗತ್ಯ ವಸ್ತುಗಳ ವಿತರಣೆ

80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 15ರಂದು ಕಾರವಾರದ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಉರ್ವಾ ಹಾಗೂ ವಾಲೆನ್ಸಿಯಾ ಶಾಖೆಗಳ ಜಂಟಿ ಆಶ್ರಯದಲ್ಲಿ ಗುರುಪುರ
News

ಸೆಪ್ಟೆಂಬರ್  8ಕ್ಕೆ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ರಜೆ ಘೋಷಿಸಲು ಮನವಿ

ಸಚಿವ ಯು.ಟಿ. ಖಾದರ್‌ ಅವರಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಹಾಗೂ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದ ನಿಯೋಗದಿಂದ ಭೇಟಿ ಕಥೊಲಿಕ್ ಕ್ರೈಸ್ತ ಸಮುದಾಯದಲ್ಲಿ ಪ್ರತೀ ವರ್ಷ ಸೆಪ್ಟೆಂಬರ್

You cannot copy content of this page