August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ. ಆಗಸ್ಟ್ 27ರಂದು ಗುರುವಾರ ನಡೆದ ಈ ದುರ್ಘಟನೆಯಲ್ಲಿ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಹಾಗೂ ವಿಮಾನ ತರಬೇತುದಾರ ಸಾಚಿನ್ ಭಾಟಿಯಾ ಮೃತಪಟ್ಟಿದ್ದಾರೆ.

ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದವರು. ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ.

ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಕುಟುಂಬದೊಂದಿಗೆ ಆಗಾಗ್ಗೆ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆಗಸ್ಟ್ 27ರಂದು ಕಾನ್ಪುರದ ಗಂಗಾ ಬ್ಯಾರೇಜ್ ಸಮೀಪದ ನಾಥಪುರವಾ ಪ್ರದೇಶದಲ್ಲಿ ತರಬೇತಿ ವಿಮಾನ ಪತನಗೊಂಡಿತ್ತು. ಗಾರ್ಗ್ ಏವಿಯೇಷನ್‌ಗೆ ಸೇರಿದ ನಾಲ್ಕು ಆಸನಗಳ ಅವಳಿ ಎಂಜಿನ್ ವಿಮಾನವು ಬೆಳಗ್ಗೆ ಸುಮಾರು 11.30ಕ್ಕೆ ಹಾರಾಟ ಆರಂಭಿಸಿ, ಸುಮಾರು 20 ನಿಮಿಷಗಳ ಬಳಿಕ ವಾಪಸ್ ಬರುತ್ತಿದ್ದ ವೇಳೆ ಪತನಗೊಂಡಿತ್ತು. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಅಭಿಷೇಕ್ ಅವರ ಕುಟುಂಬದವರು ಮುಂದಿನ ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಅಪಘಾತದ ಕುರಿತು ಡಿಜಿಸಿಎ ಹಾಗೂ ಏರ್‌ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಷನ್ ಬ್ಯೂರೋ (AAIB) ತನಿಖೆ ನಡೆಸುತ್ತಿವೆ.

You may also like

News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು
News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ”

You cannot copy content of this page