August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ ಸಂಘಟನೆಯ ಪ್ರಾರಂಭೋತ್ಸವ ಹಾಗೂ ಪುತ್ತೂರು ವಿಭಾಗದ ನೌಕರರ ಕೂಟದ ಅಧ್ಯಕ್ಷ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಪದೋನ್ನತಿಯ ನಿಮಿತ್ತ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವು ಸೆಪ್ಟೆಂಬರ್ 02ರಂದು ಬುಧವಾರ ಬೆಳಿಗ್ಗೆ 10:30ಕ್ಕೆ ಪುತ್ತೂರಿನ ಮೈನ್ ರೋಡ್‌ನಲ್ಲಿರುವ ಲಕ್ಷ್ಮೀ ಹೋಟೆಲ್ ನಲ್ಲಿ ಜರುಗಲಿದೆ.

ಮುಖ್ಯ ಉಪಸ್ಥಿತಿ ಹಾಗೂ ಪದಾಧಿಕಾರಿಗಳು:

* ಗೌರವಾಧ್ಯಕ್ಷರು: ಸುರೇಶ್ ರಾವ್

* ಸಂಸ್ಥಾಪಕ ಅಧ್ಯಕ್ಷರು: ಚಂದ್ರಶೇಖರ್ ಆರ್.

* ರಾಜ್ಯ ಪ್ರಧಾನ ಕಾರ್ಯದರ್ಶಿ: ತಿಪ್ಪೇಸ್ವಾಮಿ

* ಅಧ್ಯಕ್ಷರು: ಜೀವನ್ ಸಂತೋಷ್ ಮಾರ್ಟಿಸ್

* ಪ್ರಧಾನ ಕಾರ್ಯದರ್ಶಿಗಳು: ಯೋಗೀಂದ್ರ ಬಡಿಗೇರ್

ಈ ಶುಭ ಸಮಾರಂಭದಲ್ಲಿ ಪುತ್ತೂರು ವಿಭಾಗ ವ್ಯಾಪ್ತಿಯ ಎಲ್ಲಾ ಘಟಕಗಳ ಕೂಟದ ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ನೌಕರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೂಟದ ವತಿಯಿಂದ ವಿನಂತಿಸಲಾಗಿದೆ.

You may also like

News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು
News

ಪುತ್ತೂರು ಚಲೋಗೆ ಪೊಲೀಸ್ ಸರ್ಪಗಾವಲು – ಹಿರಿಯ ಅಧಿಕಾರಿಗಳು ಸೇರಿ ಭಾರೀ ಬಂದೋಬಸ್ತ್

ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ಪುತ್ತೂರು: ಆಗಸ್ಟ್ 31ರಂದು ಸೋಮವಾರ ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು

You cannot copy content of this page