September 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೈಂದೂರಿನ ಆಶಾ ವೀಣಾ ಡಯಾಸ್‌ ಅವರಿಗೆ ದ್ವಿತೀಯ ಸ್ಥಾನ

ಕಿರಣ್ ಬೇಡಿ ಅವರ ಕುರಿತು 5 ನಿಮಿಷಗಳ ಭಾಷಣ – ಪ್ರತಿಭೆಗೆ ರಾಜ್ಯಮಟ್ಟದಲ್ಲಿ ಮೆಚ್ಚುಗೆ

ಕರ್ನಾಟಕ ರಾಜ್ಯದ ಸಮಾಜ ವಿಜ್ಞಾನ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾರತದ ಪ್ರಥಮ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಕುರಿತು ಕೇವಲ ಐದು ನಿಮಿಷಗಳಲ್ಲಿ ನಿರರ್ಗಳವಾಗಿ ಮಾತನಾಡಿ, ಬೈಂದೂರಿನ ಆಶಾ ವೀಣಾ ಡಯಾಸ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.

ರಾಜ್ಯಮಟ್ಟದಲ್ಲಿ ನಡೆದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ತಮ್ಮ ಸ್ಪಷ್ಟ ಮಾತುಗಾರಿಕೆ, ವಿಷಯ ಮಂಡನೆ ಹಾಗೂ ಆತ್ಮವಿಶ್ವಾಸದ ಮೂಲಕ ಗಮನ ಸೆಳೆದ ಆಶಾ ವೀಣಾ ಡಯಾಸ್ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿಶೇಷವಾಗಿ, ಕಿರಣ್ ಬೇಡಿ ಅವರ ಜೀವನ, ಸೇವಾ ಮನೋಭಾವ, ಧೈರ್ಯ ಹಾಗೂ ಮಹಿಳಾ ಸಬಲೀಕರಣಕ್ಕೆ ನೀಡಿದ ಕೊಡುಗೆಗಳನ್ನು ಪರಿಣಾಮಕಾರಿಯಾಗಿ ಮಂಡಿಸುವ ಮೂಲಕ ಅವರು ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು. ಈ ಸಾಧನೆಯ ಮೂಲಕ ಆಶಾ ವೀಣಾ ಡಾಯಸ್ ಅವರು ತಮ್ಮ ಪ್ರತಿಭೆಯನ್ನು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ, ಯುವಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಪ್ರೇರಣೆಯಾಗಿದ್ದಾರೆ.

ಆಶಾ ವೀಣಾ ಡಯಾಸ್ ಅವರ ಈ ಸಾಧನೆ ಬೈಂದೂರಿಗೆ ಹೆಮ್ಮೆ ತಂದಿದ್ದು, ಅವರ ಪ್ರತಿಭೆ ಹಾಗೂ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಸಮಾಜ ಮತ್ತು ಆರೋಗ್ಯ ಹಾಗೂ ಶಿಕ್ಷಣ ಸಮಿತಿಯ ವತಿಯಿಂದ ಆಶಾ ವೀಣಾ ಡಾಯಸ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

You may also like

News

ಸೆಪ್ಟೆಂಬರ್ 14ರಿಂದ ಪಾದ್ರೆ ಪಿಯೊ ಪುಣ್ಯ ಕ್ಷೇತ್ರದ 9 ದಿನಗಳ ನೊವೇನಾ – ಸೆಪ್ಟೆಂಬರ್ 23ರಂದು ವಾರ್ಷಿಕ ಮಹೋತ್ಸವ

ಸಿಟಿ ವಲಯದ ಶ್ರೇಷ್ಠಗುರು ಫಾದರ್ ರಿಚಾರ್ಡ್ ಕುವೆಲ್ಲೊ ಅವರಿಂದ ಧ್ವಜಾರೋಹಣ ಮಂಗಳೂರಿನ ಜೈಲ್ ರಸ್ತೆಯ ಕಪುಚಿನ್ ಧರ್ಮಗುರುಗಳ ಸೈಂಟ್ ಆನ್ಸ್ ಫ್ರೈರಿ ಆವರಣದಲ್ಲಿರುವ ಸೈಂಟ್ ಪಾದ್ರೆ ಪಿಯೊ
News

“ಕಾಂಗ್ರೆಸ್‌ಗೆ ಕ್ರೈಸ್ತರು ಕೇವಲ ವೋಟ್ ಬ್ಯಾಂಕ್?” : 35 ಜಿಲ್ಲಾ ಅಧ್ಯಕ್ಷರ ಪಟ್ಟಿಯಲ್ಲೂ ಸ್ಥಾನವಿಲ್ಲ – ಆಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಮಂಗಳೂರು: ಜಾತ್ಯಾತೀತ ಸಿದ್ಧಾಂತವನ್ನು ಪ್ರತಿಪಾದಿಸುವ ಕಾಂಗ್ರೆಸ್ ಪಕ್ಷವು ಗ್ರಾಮ ಪಂಚಾಯತ್‌ನಿಂದ ಜಿಲ್ಲಾ ಪಂಚಾಯತ್‌, ವಿಧಾನ ಪರಿಷತ್‌, ವಿಧಾನಸಭೆ ಹಾಗೂ ಲೋಕಸಭೆವರೆಗೆ ವಿವಿಧ ಹಂತಗಳಲ್ಲಿ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಾಗ

You cannot copy content of this page