September 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇರಳಕಟ್ಟೆಯ ಫಾದರ್ ಮುಲ್ಲರ್ ಫಾರ್ಮಸಿ ಕಾಲೇಜಿನಲ್ಲಿ ಬಿ.ಫಾರ್ಮ್ ಮೂರನೇ ಬ್ಯಾಚ್‌ಗೆ ಚಾಲನೆ

ದೇರಳಕಟ್ಟೆಯ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್‌ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಬಿ.ಫಾರ್ಮ್ ಮೂರನೇ ಬ್ಯಾಚ್‌ನ ಕೋರ್ಸ್ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 16ರಂದು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ನಿರ್ದೇಶಕರಾದ ವಂದನೀಯ ಫಾದರ್ ಫಾವುಸ್ತಿನ್ ಲೂಕಾಸ್ ಲೋಬೋ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಲ್ಮಾ ಮೀರಾ ಡಿಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. .ಎಸ್.ಜೆ. ಪ್ರಭು ಕಿರಣ್, ಆಡಳಿತಾಧಿಕಾರಿ ವಂದನೀಯ ಫಾದರ್ ಡೊನಾಲ್ಡ್ ನಿಲೇಶ್ ಕ್ರಾಸ್ಟಾ, ಫಾದರ್ ಮುಲ್ಲರ್ ಹೋಮಿಯೋಪಥಿಕ್ ಫಾರ್ಮಾಸ್ಯುಟಿಕಲ್ ವಿಭಾಗದ ಆಡಳಿತಾಧಿಕಾರಿ ವಂದನೀಯ ಫಾದರ್ ನೆಲ್ಸನ್ ಧೀರಜ್ ಪಾಯಿಸ್ ಹಾಗೂ ಫಾರ್ಮಾಸ್ಯುಟಿಕಲ್ ಸೈನ್ಸಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸತೀಶ್ ಎಸ್., ಬೋಧಕ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ಹೊಸ ಶೈಕ್ಷಣಿಕ ಪಯಣಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಸ್ವಾಗತ ಭಾಷಣದಲ್ಲಿ ಆಡಳಿತಾಧಿಕಾರಿ ವಂದನೀಯ ಫಾದರ್ ಡೊನಾಲ್ಡ್ ನಿಲೇಶ್ ಕ್ರಾಸ್ಟಾ ಅವರು ವಿದ್ಯಾರ್ಥಿಗಳು ಶಿಸ್ತು, ಬದ್ಧತೆ ಹಾಗೂ ಪರಿಶ್ರಮದೊಂದಿಗೆ ಶೈಕ್ಷಣಿಕ ಸಾಧನೆ ಮಾಡುವಂತೆ ಕರೆ ನೀಡಿದರು. ಮುಖ್ಯ ಅತಿಥಿ ಡಾ. ವಿಲ್ಮಾ ಮೀರಾ ಡಿಸೋಜ ಅವರು ಆರೋಗ್ಯ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನ ರೂಪಿಸಿಕೊಳ್ಳಲು ಸಮರ್ಪಣೆ, ಕರುಣೆ ಹಾಗೂ ನಿರಂತರ ಕಲಿಕೆ ಅಗತ್ಯ ಎಂದು ತಿಳಿಸಿದರು.

ಅಧ್ಯಕ್ಷೀಯ ಭಾಷಣದಲ್ಲಿ ವಂದನೀಯ ಫಾದರ್ ಫಾವುಸ್ತಿನ್ ಲೂಕಾಸ್ ಲೋಬೋ ಅವರು ವೃತ್ತಿಪರ ಬೆಳವಣಿಗೆಯೊಂದಿಗೆ ಮೌಲ್ಯಗಳು, ಜವಾಬ್ದಾರಿ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಅಗತ್ಯ” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಸತೀಶ್ ಎಸ್. ಅವರು ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಗಳು, ಶೈಕ್ಷಣಿಕ ನಿರೀಕ್ಷೆಗಳು ಹಾಗೂ ಶಿಸ್ತು ಕುರಿತು ಮಾಹಿತಿ ನೀಡಿದರು. ಆಡಳಿತಾಧಿಕಾರಿ ವಂದನೀಯ ಫಾದರ್ ಡೊನಾಲ್ಡ್ ನಿಲೇಶ್ ಕ್ರಾಸ್ಟಾ ಅವರು ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿ ಹಾಸ್ಟೆಲ್ ಸೌಲಭ್ಯಗಳು ಹಾಗೂ ನಿಯಮಾವಳಿಗಳ ಕುರಿತು ವಿವರಿಸಿದರು.

ಹೊಸ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಶುಭಾರಂಭವಾದ ಈ ಸಮಾರಂಭವು ಜ್ಞಾನ, ಕೌಶಲ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವ ಸಮರ್ಥ ಫಾರ್ಮಸಿ ವೃತ್ತಿಪರರನ್ನು ರೂಪಿಸುವ ಸಂಸ್ಥೆಯ ಬದ್ಧತೆಯನ್ನು ಸಾರಿತು.

ಕಾರ್ಯಕ್ರಮವನ್ನು ಫ್ಮಿತ್ ಸೆಲ್ವಿಯಾ ಮಿರಾಂಡಾ ಹಾಗೂ ನಿಶ್ಮಿತಾ ಗ್ರೆಟ್ಟಾ ಡಿಸೋಜ ನಿರೂಪಿಸಿದರು.

You may also like

News

ಬಂಟ್ವಾಳದ ಅಬ್ದುಲ್ ರಹಮಾನ್ ಕೊಲೆ ಪ್ರಕರಣ – ಭರತ್ ಕುಮ್ದೇಲ್ ಸೇರಿ 8 ಮಂದಿಗೆ ಕೋಕಾ ಕೋರ್ಟ್ ಜಾಮೀನು

ಪ್ರಖ್ಯಾತ ಹಾಗೂ ಪ್ರತಿಷ್ಠಿತ ನ್ಯಾಯವಾದಿ ಮಹೇಶ್ ಕಜೆ ಅವರ ಪರಿಣಾಮಕಾರಿ ವಾದ ಬಂಟ್ವಾಳದ ಅಬ್ದುಲ್ ರಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ದೇಲ್ ಸೇರಿದಂತೆ ಎಂಟು ಮಂದಿಯನ್ನು
News

ಸೆಪ್ಟೆಂಬರ್ 19ರಂದು ರಾಷ್ಟ್ರೀಯ ಲೋಕ ಅದಾಲತ್ – 8,515 ಪ್ರಕರಣಗಳ ಇತ್ಯರ್ಥಕ್ಕೆ ಸಿದ್ಧತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಪ್ರಧಾನ

You cannot copy content of this page