September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಡುಪಿ – ಕಾಸರಗೋಡು – ಕಡಂದಲೆ 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ – ಕಾಸರಗೋಡು – ಕಡಂದೆಲೆ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ಮಾನ್ಯ ಮುಖ್ಯಮಂತ್ರಿಯವರು ಕರ್ನಾಟಕ ಕ್ರೀಡಾಕೂಟ 2025 ಇದರ ಉದ್ಘಾಟನೆಗೆ ಇಂದು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಖುದ್ದಾಗಿ ಭೇಟಿ ಮಾಡಿ ಸವಿಸ್ತಾರವಾಗಿ ತಿಳಿಸಿ ಈ ನಿರ್ಮಾಣ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಇಂದು ಜನವರಿ 17ರಂದು ಶುಕ್ರವಾರ ಮನವಿಯನ್ನು ಸಲ್ಲಿಸಲಾಯಿತು. ಮುಖ್ಯಮಂತ್ರಿಯವರು ತಕ್ಷಣವೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಈ ಬಗ್ಗೆ ವರದಿಯನ್ನು ನೀಡುವಂತೆ ಆದೇಶಿಸಿದರು.

ಈ ಸಂದರ್ಭದಲ್ಲಿ MLC ಐವನ್ ಡಿಸೋಜ, ಮಾಜಿ ಸಚಿವರಾದ ರಮಾನಾಥ ರೈ ಹಾಗೂ ವಿನಯ ಕುಮಾರ್ ಸೊರಕೆ, ಉದ್ಯಮಿ ಪಿಯುಸ್ ಎಲ್. ರೊಡ್ರಿಗಸ್, ಹೋರಾಟ ಸಮಿತಿ ಅಧ್ಯಕ್ಷ ವಿಕ್ಟರ್ ಕಡಂದಲೆ, ಕಥೊಲಿಕ್ ಸಭಾ ಸಿಟಿ ವಲಯದ ಅಧ್ಯಕ್ಷ ಅರುಣ್ ಡಿಸೋಜ, ಕಥೊಲಿಕ್ ಸಭಾ ಪಾಲಡ್ಕ ಘಟಕದ ಅಧ್ಯಕ್ಷ ರಿಚ್ಚರ್ಡ್ ಡಿಸೋಜ, ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿ ವಿಟ್ಲ, ರಾಜೀವ್ ಗೌಡ ವಿಟ್ಲ, ಪತ್ರಕರ್ತರಾದ ನಿಶಾಂತ್ ಬಿಲ್ಲಂಪದವು, ಅಲೆಕ್ಸ್ ಸಿಕ್ವೇರಾ ಲೊರೆಟ್ಟೊ, ಅಗ್ರಾರ್ ನವರಾದ ಅರುಣ್ ಡಿಸೋಜ, ವಿನ್ಸೆಂಟ್ ಡೇಸಾ, ಜೆಸಿಂತಾ ಲೋಬೊ, ಬೆನೆಡಿಕ್ಟಾ ಕಾರ್ಲೊ, ಲ್ಯಾನ್ಸಿ ಕಾರ್ಲೊ, ರೂಪೇಶ್ ಮಸ್ಕರೇನ್ಹಸ್, ಜೋಸ್ಪಿನ್ ಮಸ್ಕರೇನ್ಹಸ್, ಉಡುಪಿ – ಕಾಸರಗೋಡು – ಕಡಂದಲೆ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ಇನ್ನಾ, ಅಮರ್ ನಾಥ ಶೆಟ್ಟಿ ಇನ್ನಾ ಮತ್ತಿತರರು ಉಪಸ್ಥಿತರಿದ್ದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page