May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿವೃತ್ತ ನ್ಯಾಯಮೂರ್ತಿಯನ್ನೇ ವಂಚಿಸಿದ ಸೈಬರ್ ಖದೀಮರು

90 ಲಕ್ಷ ರೂಪಾಯಿ ಟೊಪ್ಪಿ ಹಾಕಿಸಿಕೊಂಡ ನಿವೃತ್ತ ಜಡ್ಜ್‌!

ಸ್ವತಃ ನಿವೃತ್ತ ನ್ಯಾಯಮೂರ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಸುದ್ದಿ ಇದೀಗ ಬಯಲಾಗಿದೆ. ಸೈಬರ್ ವಂಚನೆಯಿಂದ ಮೋಸಕ್ಕೆ ಒಳಗಾದವರು ಬೇರಾರೂ ಅಲ್ಲ, ಕೇರಳದ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಂ. ಸಸಿಧರನ್ ನಂಬಿಯಾರ್. ವಂಚಕರ ಮಾತಿಗೆ ಮರುಳಾಗಿ ಅವರು ಬರೋಬ್ಬರಿ 90 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಹಿಲ್ ಪ್ಯಾಲೇಸ್ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ ಪ್ರಕಾರ, ನ್ಯಾಯಮೂರ್ತಿ ನಂಬಿಯಾರ್ ಅವರು ಆದಿತ್ಯ ಬಿರ್ಲಾ ಇಕ್ವಿಟಿ ಲರ್ನಿಂಗ್ ಗ್ರೂಪ್ ಎಂಬ ವಾಟ್ಸಾಪ್ ಗುಂಪಿನ ಮೂಲಕ ಈ ವಂಚನೆಗೊಳಗಾಗಿದ್ದಾರೆ.

ಆಯನಾ ಜೋಸೆಫ್ ಮತ್ತು ವರ್ಷಾ ಸಿಂಗ್ ಎಂಬವರ ನೇತೃತ್ವದ ಮಹಿಳಾ ಗುಂಪು ಸಸಿಧರನ್ ಅವರನ್ನು ವಂಚನಾ ಜಾಲಕ್ಕೆ ಬೀಳಿಸಿತ್ತು. ವಂಚಕರ ಮಾತಿನ ಪ್ರಕಾರ, ಆದಿತ್ಯ ಬಿರ್ಲಾ ಇಕ್ವಿಟಿ ಲರ್ನಿಂಗ್ ಗ್ರೂಪ್ ಎಂಬ ವಾಟ್ಸಾಪ್ ಗುಂಪಿನ ಮೂಲಕ ನಕಲಿ ಶೇರು ವ್ಯಾಪಾರ ಅಪ್ಲಿಕೇಶನ್ ನಲ್ಲಿ ಹೂಡಿಕೆ ಮಾಡಲು ಸಸಿಧರನ್ ಹಣ ವರ್ಗಾಯಿಸಿದ್ದಾರೆ. ವಾಟ್ಸಪ್ ಗ್ರೂಪಿಗೆ ಸೇರಿದವರಿಗೆ ಆನ್ಲೈನ್ ಷೇರು ಮಾರುಕಟ್ಟೆಯ ಮೂಲಕ ಶೇಕಡ 850 ಆದಾಯ ನೀಡುವುದಾಗಿ ವಂಚಕರು ಭರವಸೆ ನೀಡಿದ್ದರು.

ಆದರೆ, ಅದೊಂದು ವಂಚನೆ ಎಂದು ತಿಳಿಯದೆ 2024ರ ಡಿಸೆಂಬರ್ 4ರಿಂದ ಡಿಸೆಂಬರ್ 30ರ ನಡುವೆ ಸುಮಾರು 90 ಲಕ್ಷ ರೂಪಾಯಿ ಹಣವನ್ನು ಅವರು ವರ್ಗಾವಣೆ ಮಾಡಿದ್ದಾರೆ. ಈ ಮೂಲಕ ತಾವು ವಂಚನೆಗೆ ಒಳಗಾಗಿದ್ದೇನೆ ಎಂದು ನಂಬಿಯಾರ್ ತಮ್ಮ ದೂರಿನಲ್ಲಿ ಹೇಳಿದ್ದಾರೆ. ವಂಚನೆಯ ದೂರು ದಾಖಲಾಗುತ್ತಿದ್ದಂತೆ ವಂಚಕರ ಮೊಬೈಲ್ ಫೋನ್‌ಗಳು ಸ್ವಿಚ್ ಆಫ್ ಆಗಿವೆ. ಅವರು ದಾಖಲಿಸಿರುವ ದೂರಿನಲ್ಲಿ ಜೋಸೆಫ್ ಮತ್ತು ವರ್ಷ ಸಿಂಗ್ ಎಂಬ ಹೆಸರಿನ ಇಬ್ಬರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 316 (2) ಕ್ರಿಮಿನಲ್ ನಂಬಿಕೆ ದ್ರೋಹ ಮತ್ತು 318(4) (ವಂಚನೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಡಿ (ಕಂಪ್ಯೂಟರ್ ಸಂಪನ್ಮೂಲವನ್ನು ಬಳಸಿಕೊಂಡು ಸೋಗು ಹಾಕಿ ವಂಚನೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಸಸಿಧರನ್ ಅವರು ವರ್ಗಾಯಿಸಿರುವ ಬ್ಯಾಂಕ್ ಖಾತೆಗಳು ಉತ್ತರ ಭಾರತಕ್ಕೆ ಸೇರಿದ್ದಾಗಿದೆ. ಈ ಖಾತೆಗಳ ಮೂಲವನ್ನು ಈಗಾಗಲೇ ಪತ್ತೆ ಹಚ್ಚಲಾಗಿದ್ದು, ಹಣವನ್ನು ಮರಳಿಸುವ ಭರವಸೆಯನ್ನು ತನಿಖಾಧಿಕಾರಿ ಯೇಸುದಾಸ್ ನೀಡಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page