September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ ಆಯ್ಕೆ

ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಮಸೀದಿಯ ಗೌರವಾಧ್ಯಕ್ಷ ಸಯ್ಯಿದ್ ಅಲೀ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಮಸೀದಿಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಸಿದ್ದೀಕ್ ಪರ್ಲೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ (ಅಮ್ಮಿ) ಪರ್ಲೊಟ್ಟು, ಕೋಶಾಧಿಕಾರಿಯಾಗಿ ಪಿ.ಕೆ. ಅಬ್ಬಾಸ್ ಪರ್ಲೊಟ್ಟು ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲತೀಫ್ ನೇರಳಕಟ್ಟೆ, ಹಬೀಬ್ ಕೊಡಾಜೆ, ಫಾರೂಕ್ ಗೋಳಿಕಟ್ಟೆ ಹಾಗೂ ಇಸ್ಮಾಯಿಲ್ ನೇರಳಕಟ್ಟೆ ಅವರನ್ನು ಸಭೆಯಲ್ಲಿ ಆರಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಇಬ್ರಾಹಿಂ ರಾಜ್ ಕಮಲ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕರಿಸಿದರು. ಇಲ್ಯಾಸ್ ನೇರಳಕಟ್ಟೆ ಸ್ವಾಗತಿಸಿದರು.  ನವಾಝ್ ಭಗವಂತ ಕೋಡಿ ವರದಿ ವಾಚಿಸಿ, ಲೆಕ್ಕ ಪತ್ರ ಮಂಡಿಸಿದರು.  ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ ವಂದಿಸಿದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page